ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಕಡಲ ದಿನದಂದು ಭಾರತದ ಕಡಲ ಜಗತ್ತಿನ ಪ್ರಗತಿಗೆ ಕೊಡುಗೆ ನೀಡಿದ ಎಲ್ಲರನ್ನೂ ಪ್ರಧಾನಮಂತ್ರಿ ಸ್ಮರಿಸಿದರು
प्रविष्टि तिथि:
05 APR 2023 2:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಕಡಲ ದಿನದಂದು ಬಂದರು-ನೇತೃತ್ವದ ಅಭಿವೃದ್ಧಿಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಕೇಂದ್ರ ಬಂದರು, ನೌಕಾಯಾನ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ನಾವೆಲ್ಲರೂ ಭಾರತದಲ್ಲಿ ಸಮೃದ್ಧ ಕಡಲ ಪರಂಪರೆಯ ಆಶೀರ್ವಾದವನ್ನು ಪಡೆದಿದ್ದೇವೆ ಮತ್ತು ಅದರ ಬಗ್ಗೆ ನಮಗೆ ಹೆಮ್ಮೆಯಿದೆ.
ರಾಷ್ಟ್ರೀಯ ಕಡಲ ದಿನದಂದು, ಭಾರತದ ಕಡಲ ಜಗತ್ತಿನ ಪ್ರಗತಿಗೆ ಕೊಡುಗೆ ನೀಡಿದ ಎಲ್ಲರನ್ನೂ ನಾವು ಸ್ಮರಿಸುತ್ತೇವೆ ಮತ್ತು ಬಂದರು-ನೇತೃತ್ವದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ."
*****
(रिलीज़ आईडी: 2188664)
आगंतुक पटल : 20
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam