ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


 ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 12 DEC 2025 9:09AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ  ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಗಳಿಗೆ ಪಿ.ಎಂ.ಎನ್‌.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಪಿಎಂಒ ಇಂಡಿಯಾ ತನ್ನ ಎಕ್ಸ್‌ X ಖಾತೆಯಲ್ಲಿ ಹೀಗೆ ಹೇಳಿದೆ.

“ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ಜೀವಹಾನಿಯಾಗಿವುದು ನೋವುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi”

"ఆంధ్రప్రదేశ్‌లోని అల్లూరి సీతారామరాజు జిల్లాలో జరిగిన బస్సు ప్రమాదంలో ప్రాణనష్టం సంభవించడం చాలా బాధాకరం. ఈ క్లిష్ట సమయంలో బాధిత ప్రజలు మరియు వారి కుటుంబాలకు నా ప్రగాఢ సానుభూతిని తెలియజేస్తూ, గాయపడినవారు త్వరగా కోలుకోవాలని ప్రార్థిస్తున్నాను. ప్రమాదంలో మరణించిన వారి కుటుంబాలకు రూ. 2 లక్షలు, గాయపడిన వారికి రూ. 50,000 ఎక్స్ గ్రేషియా పిఎంఎన్ఆర్ఎఫ్ నుండి ఇవ్వబడుతుంది: ಪ್ರಧಾನಮಂತ್ರಿ @narendramodi"

 

*****


(रिलीज़ आईडी: 2202791) आगंतुक पटल : 5
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Gujarati , Odia , Tamil , Telugu , Malayalam