ರಾಷ್ಟ್ರಪತಿಗಳ ಕಾರ್ಯಾಲಯ
ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿಯ ಆಚರಣೆಗೆ ಭಾರತದ ರಾಷ್ಟ್ರಪತಿ ಅವರು ಚಾಲನೆ ನೀಡಿದರು
ತ್ವರಿತ ಬದಲಾವಣೆ ಮತ್ತು ಅನಿಶ್ಚಿತತೆಯ ಈ ಯುಗದಲ್ಲಿ, ಸಾಮಾಜಿಕ ಸಾಮರಸ್ಯ, ನೈತಿಕ ನಾಯಕತ್ವ, ಯುವ ಸಬಲೀಕರಣ ಮತ್ತು ಆಂತರಿಕ ಸ್ಥಿತಿಸ್ಥಾಪಕತ್ವವನ್ನು ಬೆಳೆಸಲು ಆಧ್ಯಾತ್ಮಿಕ ಮಾರ್ಗದರ್ಶನ ಅತ್ಯಗತ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು
प्रविष्टि तिथि:
16 DEC 2025 7:04PM by PIB Bengaluru
ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಇಂದು (ಡಿಸೆಂಬರ್ 16, 2025) ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿ ಆಚರಣೆಗೆ ಭಾರತದ ಸನ್ಮಾನ್ಯ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ, ಯುಗಯುಗಾಂತರಗಳಿಂದ ಸಂತರು ತಮ್ಮ ಜ್ಞಾನ ಮತ್ತು ಕರುಣೆಯ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು. ನಿಜವಾದ ಶ್ರೇಷ್ಠತೆ, ಅಧಿಕಾರ ಅಥವಾ ಸಂಪತ್ತಿನಲ್ಲಿಲ್ಲ ಬದಲಿಗೆ ತ್ಯಾಗ, ಸೇವೆ ಮತ್ತು ಆಧ್ಯಾತ್ಮಿಕ ಶಕ್ತಿಯಲ್ಲಿದೆ ಎಂಬುದನ್ನು ಅವರ ಜೀವನವು ನಮಗೆ ನೆನಪಿಸುತ್ತದೆ. ಅಂತಹ ಶ್ರೇಷ್ಠ ಸಂತರಲ್ಲಿ ಒಬ್ಬರಾದ, ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮಿಜಿಯವರು, ನಮ್ಮ ಜೀವನವನ್ನು ಮುನ್ನಡೆಸಲು ಬೆಳಕು ಮತ್ತು ಸ್ಫೂರ್ತಿಯಾಗಿ ನೆಲೆ ನಿಂತಿದ್ದಾರೆ ಎಂದು ಅವರು ಹೇಳಿದರು.

ಮಠದ ಮಾರ್ಗದರ್ಶನ ಮತ್ತು ಆಶ್ರಯದಲ್ಲಿ, ಜೆಎಸ್ಎಸ್ ಮಹಾವಿದ್ಯಾಪೀಠವು ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿಯ ಪ್ರಗತಿಗೆ ಸಮರ್ಪಿತವಾದ ಭಾರತದ ವಿಶಿಷ್ಟ ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ರಾಷ್ಟ್ರಪತಿ ಅವರು ಸಂತೋಷ ವ್ಯಕ್ತಪಡಿಸಿದರು. ವಿಶ್ವಾದ್ಯಂತ ಹಲವಾರು ಸಂಸ್ಥೆಗಳೊಂದಿಗೆ, ಇದು ಯುವ ಮನಸ್ಸುಗಳನ್ನು ರೂಪಿಸುವುದು, ಆರೋಗ್ಯ ಸೇವೆ ಒದಗಿಸುವುದು, ಮಹಿಳೆಯರನ್ನು ಸಬಲೀಕರಣಗೊಳಿಸುವುದು, ಗ್ರಾಮೀಣ ಸಮುದಾಯಗಳಿಗೆ ಉತ್ತೇಜನ ನೀಡುವುದು, ಸಂಸ್ಕೃತಿಯನ್ನು ಸಂರಕ್ಷಿಸುವುದು ಮತ್ತು ಎಲ್ಲರನ್ನೂ ಒಳಗೊಂಡ ಸಮಾಜದ ಅಡಿಪಾಯವನ್ನು ಬಲಪಡಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದರು.

ತ್ವರಿತ ಬದಲಾವಣೆ ಮತ್ತು ಅನಿಶ್ಚಿತತೆಯ ಈ ಯುಗದಲ್ಲಿ, ಸಾಮಾಜಿಕ ಸಾಮರಸ್ಯ, ನೈತಿಕ ನಾಯಕತ್ವ, ಯುವ ಸಬಲೀಕರಣ ಮತ್ತು ಆಂತರಿಕ ಸ್ಥಿತಿಸ್ಥಾಪಕತ್ವವನ್ನು ಬೆಳೆಸಲು ಆಧ್ಯಾತ್ಮಿಕ ಮಾರ್ಗದರ್ಶನದ ಅತ್ಯಗತ್ಯವಿದೆ ಎಂದು ರಾಷ್ಟ್ರಪತಿ ಅವರು ತಿಳಿಸಿದರು. 2047ರ ವೇಳೆಗೆ ನಾವು ವಿಕಸಿತ ಭಾರತದ ದೃಷ್ಟಿಕೋನದತ್ತ ಮುನ್ನಡೆಯುತ್ತಿರುವಾಗ, ನಮಗೆ ತಂತ್ರಜ್ಞಾನದ ಶಕ್ತಿ ಮತ್ತು ಮೌಲ್ಯಗಳ ಬಲ ಎರಡೂ ಅಗತ್ಯವಿದೆ. ಅಭಿವೃದ್ಧಿ ಹೊಂದಿದ ಭಾರತಕ್ಕೆ ಆಧುನಿಕ ಶಿಕ್ಷಣವನ್ನು ನೈತಿಕ ಜ್ಞಾನದೊಂದಿಗೆ, ನಾವೀನ್ಯತೆಯನ್ನು ಪರಿಸರ ಜವಾಬ್ದಾರಿಯೊಂದಿಗೆ, ಆರ್ಥಿಕ ಬೆಳವಣಿಗೆಯನ್ನು ಸಾಮಾಜಿಕ ಸಮಾವೇಶದೊಂದಿಗೆ ಮತ್ತು ಪ್ರಗತಿಯನ್ನು ಕರುಣೆಯೊಂದಿಗೆ ಏಕೀಕರಿಸುವ ಅಗತ್ಯವಿದೆ. ಭಾರತ ಸರ್ಕಾರವು ಈ ಸಮಗ್ರ ದೃಷ್ಟಿಕೋನದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಸುತ್ತೂರು ಮಠದಂತಹ ಸಂಸ್ಥೆಗಳು ಈ ರಾಷ್ಟ್ರೀಯ ಪ್ರಯತ್ನದಲ್ಲಿ ಗಣನೀಯ ಪಾತ್ರವನ್ನು ವಹಿಸಬಲ್ಲವು ಎಂದು ಅವರು ಹೇಳಿದರು.

ನಮ್ಮ ಮಹಾನ್ ಶಕ್ತಿ ನಮ್ಮ ಯುವಕರಲ್ಲಿದೆ—ಅವರ ಶಕ್ತಿ, ಸೃಜನಶೀಲತೆ, ಮೌಲ್ಯಗಳು ಮತ್ತು ಗುಣಲಕ್ಷಣಗಳಲ್ಲಿದೆ. ಭಾರತದ ಭವಿಷ್ಯವು ಅವರ ಕೌಶಲ್ಯ ಮತ್ತು ಜ್ಞಾನದಿಂದ ಮಾತ್ರವಲ್ಲ, ಅವರ ಪ್ರಾಮಾಣಿಕತೆ ಮತ್ತು ಉದ್ದೇಶದ ಪ್ರಜ್ಞೆಯಿಂದ ರೂಪುಗೊಳ್ಳುತ್ತದೆ ಎಂದು ಸನ್ಮಾನ್ಯ ರಾಷ್ಟ್ರಪತಿ ಅವರು ಹೇಳಿದರು. ಸುತ್ತೂರು ಮಠದಂತಹ ಸಂಸ್ಥೆಗಳು ಯುವ ಮನಸ್ಸುಗಳಿಗೆ ಸ್ಫೂರ್ತಿ ನೀಡುವುದು, ಜವಾಬ್ದಾರಿಯುತ ನಾಗರಿಕರನ್ನು ಪೋಷಿಸುವುದು ಮತ್ತು ಭಾರತದ ಭವಿಷ್ಯದ ನಿರ್ಮಾತೃಗಳಿಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುವಂತೆ ಅವರು ಒತ್ತಾಯಿಸಿದರು.

ರಾಷ್ಟ್ರಪತಿ ಅವರ ಭಾಷಣವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
*****
(रिलीज़ आईडी: 2204881)
आगंतुक पटल : 43