ಪ್ರಧಾನ ಮಂತ್ರಿಯವರ ಕಛೇರಿ
ಗೌರವಾನ್ವಿತ ಅಟಲ್ ಜಿಯವರ ಜೀವನದಿಂದ ಸ್ಫೂರ್ತಿ ಪಡೆಯಲು ತಿಳಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
25 DEC 2025 8:58AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅಟಲ್ ಅವರ ಜನ್ಮದಿನವಾದ ಇಂದು ಅವರ ಜೀವನದಿಂದ ಸ್ಫೂರ್ತಿ ಪಡೆಯಲು ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ -
“यद्यदाचरति श्रेष्ठस्तत्तदेवेतरो जनः।
स यत्प्रमाणं कुरुते लोकस्तदनुवर्तते॥"
ಈ ಸುಭಾಷಿತವು, ಒಬ್ಬ ಮಹಾನ್ ವ್ಯಕ್ತಿಯನ್ನು ಏನು ಮಾಡುತ್ತಾರೋ ಅದನ್ನು ಸಾಮಾನ್ಯ ಅನುಸರಿಸುತ್ತಾರೆದು ತಿಳಿಸುತ್ತದೆ. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ನಾಯಕ ಅಥವಾ ಅನುಕರಣೀಯ ವ್ಯಕ್ತಿಯ ನಡವಳಿಕೆಯು ಸಮಾಜ ಮತ್ತು ಅನುಯಾಯಿಗಳಿಗೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ.
ಅಟಲ್ ಅವರ ನಡವಳಿಕೆ, ಘನತೆ, ಸೈದ್ಧಾಂತಿಕ ದೃಢಸಂಕಲ್ಪ ಮತ್ತು ರಾಷ್ಟ್ರದ ಹಿತಾಸಕ್ತಿ ಎಲ್ಲಕ್ಕಿಂತ ಮಿಗಿಲೆನ್ನುವ ಸಂಕಲ್ಪವು ಭಾರತೀಯ ರಾಜಕೀಯಕ್ಕೆ ಆದರ್ಶ ಮಾನದಂಡವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ತಮ್ಮ ಜೀವನದ ಮೂಲಕ, ಶ್ರೇಷ್ಠತೆಯು ಸ್ಥಾನದಿಂದ ಸ್ಥಾಪಿಸಲ್ಪಡುವುದಿಲ್ಲ, ಆದರೆ ನಡವಳಿಕೆಯಿಂದ ಸ್ಥಾಪಿಸಲ್ಪಡುತ್ತದೆ ಮತ್ತು ಅದು ಸಮಾಜವನ್ನು ಮಾರ್ಗದರ್ಶಿಸುತ್ತದೆ ಎಂಬುದನ್ನು ಅವರು ನಿರೂಪಿಸಿದ್ದಾರೆ’’ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“आदरणीय अटल जी की जन्म-जयंती हम सबके लिए उनके जीवन से प्रेरणा लेने का एक विशेष अवसर है। उनका आचरण, शालीनता, वैचारिक दृढ़ता और राष्ट्रहित को सर्वोपरि रखने का संकल्प भारतीय राजनीति के लिए एक आदर्श मानक है। उन्होंने अपने जीवन से यह सिद्ध किया कि श्रेष्ठता पद से नहीं, आचरण से स्थापित होती है और वही समाज को दिशा देती है।
इस अवसर पर मैं इस सुभाषित को साझा कर रहा हूं, जो उनके जीवन के एक पहलू को परिभाषित करता है:
यद्यदाचरति श्रेष्ठस्तत्तदेवेतरो जनः।
स यत्प्रमाणं कुरुते लोकस्तदनुवर्तते॥"
*****
(ಪ್ರಕಟಣೆ ಐ.ಡಿ.: 2208418)
ವಿಸಿಟರ್ ಕೌಂಟರ್ : 46
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu