ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಭಾರತ ಮಾತೆಯ ವೀರ ಪುತ್ರ ರಾಸ್ ಬಿಹಾರಿ ಬೋಸ್ ಅವರ ಪುಣ್ಯತಿಥಿಯಂದು ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ


ಗದರ್ ಕ್ರಾಂತಿಯಿಂದ ಆಜಾದ್ ಹಿಂದ್ ಫೌಜ್ ಸ್ಥಾಪನೆಯವರೆಗೆ, ರಾಸ್ ಬಿಹಾರಿ ಬೋಸ್ ಅವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕನ್ನು ನೀಡಿದರು

ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮೂಲಕ ಅವರು ವಿದೇಶದಲ್ಲಿ ಭಾರತದ ಸ್ವಾತಂತ್ರ್ಯ ಚಳವಳಿಗೆ ಬೆಂಬಲ ಮತ್ತು ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮತ್ತಷ್ಟು ವಿಸ್ತರಿಸಿದರು

ಪ್ರಕಟಣಾ ದಿನಾಂಕ: 21 JAN 2026 12:58PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಭಾರತ ಮಾತೆಯ ವೀರ ಪುತ್ರ ರಾಸ್ ಬಿಹಾರಿ ಬೋಸ್ ಅವರ ಪುಣ್ಯತಿಥಿಯಂದು ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ತಮ್ಮ ಎಕ್ಸ್ ವೇದಿಕೆಯಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ, ಗದರ್ ಕ್ರಾಂತಿಯಿಂದ ಆಜಾದ್ ಹಿಂದ್ ಫೌಜ್ ಸ್ಥಾಪನೆಯವರೆಗೆ, ರಾಸ್ ಬಿಹಾರಿ ಬೋಸ್ ಅವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕನ್ನು ನೀಡಿದರು ಎಂದು ಹೇಳಿದ್ದಾರೆ. ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮೂಲಕ ವಿದೇಶದಲ್ಲಿ ಭಾರತದ ಸ್ವಾತಂತ್ರ್ಯ ಚಳವಳಿಗೆ ಬೆಂಬಲ ಮತ್ತು ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮತ್ತಷ್ಟು ವಿಸ್ತರಿಸಿದರು.

 

*****


(ಪ್ರಕಟಣೆ ಐ.ಡಿ.: 2216834) ವಿಸಿಟರ್ ಕೌಂಟರ್ : 25