ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಣರಾಜ್ಯೋತ್ಸವದ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 26 JAN 2026 8:22AM by PIB Bengaluru

ಗಣರಾಜ್ಯೋತ್ಸವವು ಭಾರತದ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಪ್ರಬಲ ಸಂಕೇತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂದರ್ಭವು ರಾಷ್ಟ್ರ ನಿರ್ಮಾಣದ ಕಡೆಗೆ ದೃಢವಾದ ಸಂಕಲ್ಪದೊಂದಿಗೆ ಒಟ್ಟಾಗಿ ಮುಂದುವರಿಯಲು ಹೊಸ ಶಕ್ತಿ ಮತ್ತು ಪ್ರೇರಣೆಯೊಂದಿಗೆ ರಾಷ್ಟ್ರವನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ-

“पारतन्त्र्याभिभूतस्य देशस्याभ्युदयः कुतः। अतः स्वातन्त्र्यमाप्तव्यमैक्यं स्वातन्त्र्यसाधनम्॥”

ಅವಲಂಬಿತವಾಗಿರುವ ಅಥವಾ ಅಧೀನವಾಗಿರುವ ರಾಷ್ಟ್ರವು ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದು ಸುಭಾಷಿತಂ ತಿಳಿಸುತ್ತದೆ. ಆದ್ದರಿಂದ, ಸ್ವಾತಂತ್ರ್ಯ ಮತ್ತು ಏಕತೆಯನ್ನು ನಮ್ಮ ಮಾರ್ಗದರ್ಶಿ ತತ್ವಗಳಾಗಿ ಅಳವಡಿಸಿಕೊಳ್ಳುವ ಮೂಲಕ ಮಾತ್ರ ರಾಷ್ಟ್ರದ ಪ್ರಗತಿಯನ್ನು ಖಚಿತಪಡಿಸಿಕೊಳ್ಳಬಹುದು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“गणतंत्र दिवस हमारी स्वतंत्रता, संविधान और लोकतांत्रिक मूल्यों का सशक्त प्रतीक है। यह पर्व हमें एकजुट होकर राष्ट्र निर्माण के संकल्प के साथ आगे बढ़ने की नई ऊर्जा और प्रेरणा देता है।

पारतन्त्र्याभिभूतस्य देशस्याभ्युदयः कुतः।

अतः स्वातन्त्र्यमाप्तव्यमैक्यं स्वातन्त्र्यसाधनम्॥”

 

*****


(रिलीज़ आईडी: 2218739) आगंतुक पटल : 10
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Gujarati , Malayalam