ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 FEB 2026 9:15AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ರವಿದಾಸ್ ಮಹಾರಾಜ್ ಅವರ ಚಿಂತನೆಗಳಲ್ಲಿ ನ್ಯಾಯ ಮತ್ತು ಕರುಣೆಯ ಅತ್ಯುನ್ನತವಾಗಿದ್ದು, ಅದುವೇ ನಮ್ಮ ಸಾರ್ವಜನಿಕ ಕಲ್ಯಾಣ ಯೋಜನೆಗಳ ಅತ್ಯಂತ ಮೂಲಾಧಾರವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. “ಅವರು ಪ್ರಜ್ವಲಿಸಿದ ಸಾಮಾಜಿಕ ಸೌಹಾರ್ದತೆ ಮತ್ತು ಸದುದ್ದೇಶದ ದೀಪವು ದೇಶದ ಜನರ ಹಾದಿಯನ್ನು ಸದಾ ಪ್ರಕಾಶಮಾನಗೊಳಿಸುತ್ತಲೇ ಇರುತ್ತದೆ,” ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. 

ಶ್ರೀ ಮೋದಿಯವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ:  

"मानवता के अनन्य उपासक महान संत श्री गुरु रविदास महाराज जी को उनकी जयंती पर कोटि-कोटि नमन। उनके विचारों में न्याय और करुणा का भाव सर्वोपरि था, जो जनकल्याण की हमारी योजनाओं के मूल में है। उन्होंने सामाजिक समरसता और सद्भावना के जिस दीप को प्रज्वलित किया, वह देशवासियों के पथ को सदैव आलोकित करता रहेगा।”

 

*****


(ಪ್ರಕಟಣೆ ಐ.ಡಿ.: 2221365) ವಿಸಿಟರ್ ಕೌಂಟರ್ : 40