ಪ್ರಧಾನ ಮಂತ್ರಿಯವರ ಕಛೇರಿ
'ವಿಕಾಸ್ ಭಿ, ವಿರಾಸತ್ ಭಿ' ಎಂಬ ಮಂತ್ರವನ್ನು ಅಳವಡಿಸಿಕೊಳ್ಳುವುದು ತ್ರಿಪುರಾ ತನ್ನ ಬೆಳವಣಿಗೆಯ ಪಯಣದಲ್ಲಿ ತ್ವರಿತ ವೇಗವನ್ನು ಪಡೆಯಲು ಹೇಗೆ ಸಹಾಯ ಮಾಡಿದೆ ಎಂಬುದನ್ನು ಒತ್ತಿಹೇಳುವ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
03 FEB 2026 2:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಾಸ್ ಭಿ, ವಿರಾಸತ್ ಭಿ' ಎಂಬ ಮಂತ್ರವನ್ನು ಅಳವಡಿಸಿಕೊಂಡು ತ್ರಿಪುರಾ ತನ್ನ ಬೆಳವಣಿಗೆಯ ಪಯಣದಲ್ಲಿ ತ್ವರಿತ ವೇಗವನ್ನು ಪಡೆಯಲು ಹೇಗೆ ಸಹಾಯ ಮಾಡಿದೆ ಎಂಬುದನ್ನು ಒತ್ತಿ ಹೇಳಿದರು.
ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ತಮ್ಮ ಇತ್ತೀಚಿನ ತ್ರಿಪುರಾ ಭೇಟಿಯ ಅನುಭವಗಳನ್ನು ಹಂಚಿಕೊಂಡ ಎಕ್ಸ್ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಬದಲಾಗುತ್ತಿರುವ ಮುಖ ಮತ್ತು ಅದರ ಅಪಾರ ಸಾಮರ್ಥ್ಯವನ್ನು ಬಿಂಬಿಸಿದ್ದಾರೆ. ತ್ರಿಪುರಾವು ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯಲ್ಲಿ ಮಾತ್ರವಲ್ಲದೆ, ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಮತ್ತು ಆಚರಿಸುವಲ್ಲಿಯೂ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:
“विकास भी, विरासत भी’ के मंत्र को आत्मसात करते हुए त्रिपुरा विकास की तेज रफ्तार पकड़ चुका है और हर दिन नई-नई उपलब्धियां दर्ज कर रहा है। केंद्रीय मंत्री @JM_Scindia जी ने त्रिपुरा प्रवास के अपने अनुभवों को साझा करते हुए राज्य की बदलती तस्वीर और अपार संभावनाओं के बारे में विस्तार से बताया है। पढ़िए उनका यह आलेख… ”
*****
(ಪ್ರಕಟಣೆ ಐ.ಡಿ.: 2222526)
ವಿಸಿಟರ್ ಕೌಂಟರ್ : 2