ಪ್ರಧಾನ ಮಂತ್ರಿಯವರ ಕಛೇರಿ
ಮಣಿಪುರದ ನೂತನ ಮುಖ್ಯಮಂತ್ರಿ ಮತ್ತು ಸಚಿವರಿಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
04 FEB 2026 7:50PM by PIB Bengaluru
ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಯುಮ್ನಾಮ್ ಖೇಮ್ ಚಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀಮತಿ ನೆಮ್ಚಾ ಕಿಪ್ಗೆನ್ ಮತ್ತು ಶ್ರೀ ಲೋಸಿ ದಿಖೋ ಅವರಿಗೂ ಪ್ರಧಾನಮಂತ್ರಿ ಶುಭ ಕೋರಿದ್ದಾರೆ. ಮಣಿಪುರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಕೊಂಥೌಜಮ್ ಗೋವಿಂದಾಸ್ ಸಿಂಗ್ ಮತ್ತು ಶ್ರೀ ಖುರೈಜಮ್ ಲೋಕೆನ್ ಸಿಂಗ್ ಅವರನ್ನು ಸಹ ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ.
ಮಣಿಪುರದ ಸಹೋದರ ಸಹೋದರಿಯರ ಅಭಿವೃದ್ಧಿ ಮತ್ತು ಸಮೃದ್ಧಿ ವರ್ಧನೆಗೆ ಇವರು ಶ್ರದ್ಧೆಯಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ನೂತನ ನಾಯಕತ್ವಲ್ಲಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಶ್ರೀ ಯುಮ್ನಾಮ್ ಖೇಮ್ ಚಂದ್ ಸಿಂಗ್ ಅವರಿಗೆ ಅಭಿನಂದನೆಗಳು.
ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ನೆಮ್ಚಾ ಕಿಪ್ಗೆನ್ ಮತ್ತು ಶ್ರೀ ಲೋಸಿ ದಿಖೋ ಹಾಗೂ ಮಣಿಪುರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಕೊಂಥೌಜಮ್ ಗೋವಿಂದಾಸ್ ಸಿಂಗ್ ಮತ್ತು ಶ್ರೀ ಖುರೈಜಮ್ ಲೋಕೆನ್ ಸಿಂಗ್ ಅವರಿಗೆ ನನ್ನ ಅಭಿನಂದನೆಗಳು.
ಮಣಿಪುರದ ನನ್ನ ಸಹೋದರ ಸಹೋದರಿಯರ ಅಭಿವೃದ್ಧಿ ಮುನ್ನಡೆಸಲು ಮತ್ತು ಸಮೃದ್ಧಿಗಾಗಿ ನೂತನ ನಾಯಕರು ಶ್ರದ್ಧೆಯಿಂದ ಕಾರ್ಯನಿರ್ವಹಿಸುವರು ಎಂದು ನನಗೆ ವಿಶ್ವಾಸವಿದೆ.”
*****
(ಪ್ರಕಟಣೆ ಐ.ಡಿ.: 2223517)
ವಿಸಿಟರ್ ಕೌಂಟರ್ : 4