ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಲೇಷ್ಯಾ ಭೇಟಿಗೂ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನದ ಹೇಳಿಕೆ

ಪ್ರಕಟಣಾ ದಿನಾಂಕ: 07 FEB 2026 8:45AM by PIB Bengaluru

ಮಲೇಷ್ಯಾ ಪ್ರಧಾನಮಂತ್ರಿ, ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ನಾನು ಇಂದು ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದೇನೆ.

ಭಾರತ ಮತ್ತು ಮಲೇಷ್ಯಾ ನಡುವಿನ ಐತಿಹಾಸಿಕ ಬಾಂಧವ್ಯವು ಇತ್ತೀಚಿನ ವರ್ಷಗಳಲ್ಲಿ ಸ್ಥಿರ ಪ್ರಗತಿಯನ್ನು ಕಂಡಿದೆ. ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಚರ್ಚಿಸಲು ಮತ್ತು ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ವರ್ಧಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ರಕ್ಷಣೆ ಮತ್ತು ಭದ್ರತಾ ಸಂಬಂಧಗಳನ್ನು ಗಾಢವಾಗಿಸುವ, ಆರ್ಥಿಕ ಮತ್ತು ನಾವಿನ್ಯತಾ ಪಾಲುದಾರಿಕೆಯನ್ನು ಹೆಚ್ಚಿಸುವ ಹಾಗೂ ಹೊಸ ಕ್ಷೇತ್ರಗಳಿಗೆ ನಮ್ಮ ಸಹಯೋಗವನ್ನು ವಿಸ್ತರಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ಮಲೇಷ್ಯಾದಲ್ಲಿರುವ ಭಾರತೀಯ ಸಮುದಾಯದವರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ. ಸುಮಾರು ಮೂರು ದಶಲಕ್ಷ ಜನರಿರುವ ಅಲ್ಲಿನ ಜನರು ವಿಶ್ವದ ಅತಿದೊಡ್ಡ ಭಾರತೀಯ ಅನಿವಾಸಿಗಳ ಪೈಕಿ ಸೇರಿದ್ದಾರೆ. ಮಲೇಷ್ಯಾದ ಪ್ರಗತಿಗೆ ಅವರ ಅನನ್ಯ ಕೊಡುಗೆ ಮತ್ತು ನಮ್ಮ ಎರಡು ರಾಷ್ಟ್ರಗಳ ನಡುವಿನ ಜೀವಂತ ಸೇತುವೆಯಾಗಿ ಅವರ ಪಾತ್ರವು ನಮ್ಮ ಐತಿಹಾಸಿಕ ಸ್ನೇಹಕ್ಕೆ ಸದೃಢ ಅಡಿಪಾಯವನ್ನು ಒದಗಿಸಿದೆ.

 

*****


(ಪ್ರಕಟಣೆ ಐ.ಡಿ.: 2224813) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Assamese , Gujarati , Tamil , Kannada , Malayalam