ಪ್ರಧಾನ ಮಂತ್ರಿಯವರ ಕಛೇರಿ
ಕೇಂದ್ರ ಮಾಜಿ ಸಚಿವರಾದ ಶ್ರೀ ಮುಕುಲ್ ರಾಯ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
23 FEB 2026 10:21AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮಾಜಿ ಸಚಿವರಾದ ಶ್ರೀ ಮುಕುಲ್ ರಾಯ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮುಕುಲ್ ರಾಯ್ ಅವರನ್ನು ಅವರ ರಾಜಕೀಯ ಅನುಭವ ಮತ್ತು ಸಮಾಜ ಸೇವೆಗಾಗಿ ಮಾಡಿದ ಪ್ರಯತ್ನಗಳಿಗಾಗಿ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
"ಕೇಂದ್ರದ ಮಾಜಿ ಸಚಿವರಾದ ಶ್ರೀ ಮುಕುಲ್ ರಾಯ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ರಾಜಕೀಯ ಅನುಭವ ಮತ್ತು ಸಮಾಜ ಸೇವೆಗಾಗಿ ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ."
*****
(ಪ್ರಕಟಣೆ ಐ.ಡಿ.: 2231661)
ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Gujarati
,
Tamil
,
Telugu
,
Malayalam