ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ; ನಾವೀನ್ಯತೆಯಲ್ಲಿ ಪ್ರತಿಭೆ ಮತ್ತು ಕಠಿಣ ಪರಿಶ್ರಮದ ಒಗ್ಗೂಡುವಿಕೆಯನ್ನು ವಿವರಿಸಿದ್ದಾರೆ

ಪ್ರಕಟಣಾ ದಿನಾಂಕ: 24 FEB 2026 9:37AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ, ನಾವೀನ್ಯತೆಯ ಯಶಸ್ಸು, ಪ್ರತಿಭೆ ಮತ್ತು ನಿರಂತರ ಪ್ರಯತ್ನ - ಈ ಎರಡರ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ.

ಫಲಿತಾಂಶಗಳನ್ನು ಸಾಧಿಸಲು ವೈಯಕ್ತಿಕ ಸಾಮರ್ಥ್ಯವನ್ನು ಕ್ರಿಯೆಯೊಂದಿಗೆ ಪೂರೈಸಬೇಕು ಎಂಬ ಕಾಲಾತೀತ ಬುದ್ಧಿವಂತಿಕೆಯನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಪ್ರಧಾನಮಂತ್ರಿಯವರು ಹಂಚಿಕೊಂಡ ಸಂಸ್ಕೃತ ಸುಭಾಷಿತ ಸಂದೇಶ ಹೀಗಿದೆ:

यथैकेन न हस्तेन तालिका सम्प्रपद्यते।

तथोग्यमपरित्यक्तं न फलं कर्मण: स्मृतम्।।

"ಒಂದು ಕೈಯಿಂದ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲದಂತೆಯೇ, ಪ್ರಯತ್ನವಿಲ್ಲದೆ ನಾವೀನ್ಯತೆಯ ಯಶಸ್ಸು ಸಾಧ್ಯವಿಲ್ಲ. ಪ್ರತಿಭೆ ಕಠಿಣ ಪರಿಶ್ರಮ ಮತ್ತು ನಿರಂತರ ಕ್ರಿಯೆಯಿಂದ ಬೆಂಬಲಿತವಾದಾಗ ಮಾತ್ರ ಫಲ ನೀಡುತ್ತದೆ."

“ಎಕ್ಸ್” ತಾಣದ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಬರೆದಿದ್ದಾರೆ: 

यथैकेन न हस्तेन तालिका सम्प्रपद्यते।

तथोद्यमपरित्यक्तं न फलं कर्मणः स्मृतम्॥

 

*****


(ಪ್ರಕಟಣೆ ಐ.ಡಿ.: 2232022) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Manipuri , Assamese , Punjabi , Gujarati , Tamil , Telugu , Malayalam