ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜೋರ್ಡಾನ್ ಮಹಾರಾಜರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ 

ಪ್ರಕಟಣಾ ದಿನಾಂಕ: 02 MAR 2026 9:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ಮಹಾ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಈ ಪ್ರದೇಶದಲ್ಲಿನ ಉಲ್ಬಣಿಸಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರು ತೀವ್ರ ಕಳವಳ ವ್ಯಕ್ತಪಡಿಸಿದರು, ಹಾಗೂ ಜೋರ್ಡಾನ್ ಜನರ ಶಾಂತಿ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಅವರು ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.

ಈ ಕಷ್ಟದ ಸಂದರ್ಭದಲ್ಲಿ ಜೋರ್ಡಾನ್‌ ದೇಶದನಲ್ಲಿರುವ ಭಾರತೀಯ ಸಮುದಾಯವನ್ನು ಕಾಳಜಿ ಪೂರ್ವಕವಾಗಿ ನೋಡಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿಯವರು ಮಹಾರಾಜರ ಅವರಿಗೆ ಧನ್ಯವಾದ ತಿಳಿಸಿದರು.

ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;

"ಜೋರ್ಡಾನ್ ಮಹಾರಾಜ ಅಬ್ದುಲ್ಲಾ II ಅವರೊಂದಿಗೆ ಮಾತನಾಡಿದೆ. ಪ್ರದೇಶದಲ್ಲಿನ  ವಿಕಸನಗೊಳ್ಳುತ್ತಿರುವ ಉಲ್ಬಣ ಪರಿಸ್ಥಿತಿಯ ಬಗ್ಗೆ ನಮ್ಮ ಆಳವಾದ ಕಳವಳವನ್ನು ತಿಳಿಸಿದ್ದೇನೆ. ಶಾಂತಿ, ಭದ್ರತೆ ಮತ್ತು ಜೋರ್ಡಾನ್ ಜನರ ಯೋಗಕ್ಷೇಮಕ್ಕಾಗಿ ನಾವು ನಮ್ಮ ಬೆಂಬಲವನ್ನು ಪುನರುಚ್ಚರಿಸಿದೆ. ಈ ಕಷ್ಟದ ಸಂದರ್ಭದಲ್ಲಿ ಜೋರ್ಡಾನ್‌ ನಲ್ಲಿರುವ ಭಾರತೀಯ ಸಮುದಾಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ತಿಳಿಸಿದ್ದೇನೆ."

 

*****


(ಪ್ರಕಟಣೆ ಐ.ಡಿ.: 2234876) ವಿಸಿಟರ್ ಕೌಂಟರ್ : 74