ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯು ಆಂಧ್ರಪ್ರದೇಶ, ಛತ್ತೀಸ್ ಗಢ, ಗುಜರಾತ್, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ 1,912.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವು ನೀಡಲು ಅನುಮೋದನೆ ನೀಡಿದೆ


2025ರಲ್ಲಿ ಪ್ರವಾಹ / ಹಠಾತ್ ಪ್ರವಾಹ, ಮೇಘಸ್ಫೋಟ, ಭೂಕುಸಿತ, ಚಂಡಮಾರುತ 'ಮಾಂತಾ' ನಿಂದ ಬಾಧಿತವಾದ ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸಹಾಯವನ್ನು ಅನುಮೋದಿಸಲಾಗಿದೆ.

ಆಂಧ್ರಪ್ರದೇಶಕ್ಕೆ 341.48 ಕೋಟಿ ರೂ., ಛತ್ತೀಸ್ ಗಢಕ್ಕೆ 15.70 ಕೋಟಿ ರೂ., ಗುಜರಾತ್ ಗೆ 778.67 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 288.39 ಕೋಟಿ ರೂ., ನಾಗಾಲ್ಯಾಂಡ್ ಗೆ 158.41 ಕೋಟಿ ರೂ. ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ 330.34 ಕೋಟಿ ರೂ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು ನೈಸರ್ಗಿಕ ವಿಕೋಪಗಳ ಸಮಯದಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಮತ್ತು ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತದೆ

2025-26ರ ಆರ್ಥಿಕ ವರ್ಷದಲ್ಲಿ, ಕೇಂದ್ರ ಸರ್ಕಾರವು ಎಸ್ ಡಿಆರ್ ಎಫ್ ಅಡಿಯಲ್ಲಿ 28 ರಾಜ್ಯಗಳಿಗೆ 20,735.20 ಕೋಟಿ ರೂ.ಗಳನ್ನು ಮತ್ತು ಎನ್ ಡಿಆರ್ ಎಫ್ ಅಡಿಯಲ್ಲಿ 21 ರಾಜ್ಯಗಳಿಗೆ 3,628.18 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ

ಪ್ರಕಟಣಾ ದಿನಾಂಕ: 13 MAR 2026 11:01AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯು 2025 ರಲ್ಲಿ ಪ್ರವಾಹ, ಹಠಾತ್ ಪ್ರವಾಹ, ಮೇಘಸ್ಫೋಟ, ಚಂಡಮಾರುತ 'ಮಾಂತಾ' ಭೂಕುಸಿತದಿಂದ ಹಾನಿಗೊಳಗಾದ ಆಂಧ್ರಪ್ರದೇಶ, ಛತ್ತೀಸ್ ಗಢ, ಗುಜರಾತ್, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಿಗೆ 1,912.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವು ನೀಡಲು ಅನುಮೋದನೆ ನೀಡಿದೆ.

ಈ ಕೇಂದ್ರದ ನೆರವನ್ನು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್ ಡಿ ಆರ್ ಎಫ್) ಒದಗಿಸಲಾಗಿದೆ. ಇದು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಲ್ಲಿ (ಎಸ್ ಡಿ ಆರ್ ಎಫ್) ಲಭ್ಯವಿರುವ ವರ್ಷದ ಆರಂಭಿಕ ಬಾಕಿಯ ಶೇ.50 ರ ಹೊಂದಾಣಿಕೆಗೆ ಒಳಪಟ್ಟಿರುತ್ತದೆ. ಒಟ್ಟು 1,912.99 ಕೋಟಿ ರೂ.ಗಳಲ್ಲಿ ಆಂಧ್ರಪ್ರದೇಶಕ್ಕೆ 341.48 ಕೋಟಿ ರೂ., ಛತ್ತೀಸ್ ಗಢಕ್ಕೆ 15.70 ಕೋಟಿ ರೂ., ಗುಜರಾತ್ ಗೆ 778.67 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 288.39 ಕೋಟಿ ರೂ., ನಾಗಾಲ್ಯಾಂಡ್ ಗೆ 158.41 ಕೋಟಿ ರೂ. ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ 330.34 ಕೋಟಿ ರೂ.ಗಳನ್ನು ನೀಡಲು ಅನುಮೋದಿಸಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಭಾರತ ಸರ್ಕಾರವು ನೈಸರ್ಗಿಕ ವಿಕೋಪಗಳು ಮತ್ತು ವಿಪತ್ತುಗಳ ಸಮಯದಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ.

ಈ ಹೆಚ್ಚುವರಿ ನೆರವು ಈಗಾಗಲೇ ರಾಜ್ಯಗಳ ವಿಲೇವಾರಿಯಲ್ಲಿ ಇರುವ ರಾಜ್ಯ ವಿಪತ್ತು ಸ್ಪಂದನಾ ನಿಧಿ (ಎಸ್.ಡಿ.ಆರ್.ಎಫ್.) ನಲ್ಲಿ ರಾಜ್ಯಗಳಿಗೆ ಕೇಂದ್ರವು ಬಿಡುಗಡೆ ಮಾಡಿದ ನಿಧಿಗಿಂತ ಹೆಚ್ಚಿನದಾಗಿದೆ. 2025-26ರ ಆರ್ಥಿಕ ವರ್ಷದಲ್ಲಿ, ಕೇಂದ್ರ ಸರ್ಕಾರವು ಎಸ್ ಡಿಆರ್ ಎಫ್ ಅಡಿಯಲ್ಲಿ 28 ರಾಜ್ಯಗಳಿಗೆ 20,735.20 ಕೋಟಿ ರೂ.ಗಳನ್ನು ಮತ್ತು 21 ರಾಜ್ಯಗಳಿಗೆ ಎನ್ ಡಿಆರ್ ಎಫ್ ಅಡಿಯಲ್ಲಿ 3,628.18 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಹೆಚ್ಚುವರಿಯಾಗಿ, ರಾಜ್ಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ (ಎಸ್ ಡಿ ಎಂ ಎಫ್) 23 ರಾಜ್ಯಗಳಿಗೆ 5,373.20 ಕೋಟಿ ರೂ.ಗಳನ್ನು ಮತ್ತು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ (ಎನ್ ಡಿಎಂಎಫ್) 21 ರಾಜ್ಯಗಳಿಗೆ 1,189.56 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

 

*****


(ಪ್ರಕಟಣೆ ಐ.ಡಿ.: 2239459) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Punjabi , Gujarati , Tamil