ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೇರಳಂನ ಎರ್ನಾಕುಲಂನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆಯ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 MAR 2026 8:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮಾಂಚಕ ಕರಾವಳಿ ನಗರವಾದ ಕೊಚ್ಚಿಗೆ ಭೇಟಿ ನೀಡಿ ಬಹು ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಕೇರಳಂ ಅಭಿವೃದ್ಧಿಯನ್ನು ವೇಗಗೊಳಿಸಿದರು. ಪ್ರಧಾನಮಂತ್ರಿ ಅವರು ಸುಮಾರು 11,000 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೊಚ್ಚಿಗೆ ಬರುವುದು ಯಾವಾಗಲೂ ಅದ್ಭುತ ಅನುಭವವಾಗಿದೆ ಎಂದು ಹೇಳಿದರು. "ಈ ಯೋಜನೆಗಳಿಗಾಗಿ ನಾನು ಕೇರಳದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ" ಎಂದು ಹೇಳಿದರು. 

ಈ ಸಂಬಂಧ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಗಳಲ್ಲಿ ಇಣುಕುನೋಟಗಳನ್ನು ಹಂಚಿಕೊಂಡ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:

"ಇಂದು, ಸಮುದ್ರಕಳೆ ಉತ್ಪಾದನೆಯಲ್ಲಿ ಹೊಸ ಅವಕಾಶಗಳು ಹೊರಹೊಮ್ಮುತ್ತಿವೆ. ನಮ್ಮ ಸರ್ಕಾರ ಇದನ್ನು ಪ್ರೋತ್ಸಾಹಿಸುತ್ತಿದೆ. ಅಂತೆಯೇ, ನಾವು ಆಧುನಿಕ ಮೀನು ಕೃಷಿ ಪದ್ಧತಿಗಳನ್ನು ಸಹ ಉತ್ತೇಜಿಸುತ್ತಿದ್ದೇವೆ.

"ಮೀನುಗಾರರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ರಚಿಸಿದ್ದು ನಮ್ಮ ಸರ್ಕಾರ. ಇದು ಕೇರಳಕ್ಕೆ ಗಮನಾರ್ಹ ಪ್ರಯೋಜನವನ್ನು ನೀಡಿದೆ. ಈ ವಲಯದಲ್ಲಿಯೂ ಎಫ್ ಪಿಒಗಳು ಬೆಳೆಯುತ್ತಿರುವುದನ್ನು ನೋಡುವುದು ಅದ್ಭುತವಾಗಿದೆ."

"ಅಖಿಲಾ ಕೇರಳ ಧೀವಾರ ಸಭಾ ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ಏಕತೆಯನ್ನು ಉತ್ತೇಜಿಸುವಲ್ಲಿ ಬಹಳ ಮಹತ್ವದ ಕೊಡುಗೆ ನೀಡಿದೆ."

"ಕೊಚ್ಚಿ ಸಂಸ್ಕರಣಾಗಾರದಲ್ಲಿನ ಪಾಲಿಪ್ರೊಪಿಲೀನ್ ಘಟಕವು ಸ್ವಾವಲಂಬನೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಮತ್ತು ಪ್ಯಾಕೇಜಿಂಗ್, ಜವಳಿ, ವಾಹನಗಳು ಮತ್ತು ವೈದ್ಯಕೀಯ ಸಾಧನಗಳಂತಹ ಅನೇಕ ಕ್ಷೇತ್ರಗಳನ್ನು ಬೆಂಬಲಿಸುತ್ತದೆ."

"ಕೇರಳಂನಲ್ಲಿ ಸಂಪರ್ಕಕ್ಕೆ ಉತ್ತೇಜನ!"

 

*****


(ಪ್ರಕಟಣೆ ಐ.ಡಿ.: 2239501) ವಿಸಿಟರ್ ಕೌಂಟರ್ : 32
ಪ್ರಕಟಣೆಯನ್ನು ಇದರಲ್ಲಿ ಓದಿ: Punjabi , English , Urdu , Marathi , हिन्दी , Assamese , Manipuri , Bengali , Gujarati , Tamil , Telugu , Malayalam