ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮತುವಾ ಧರ್ಮ ಮೇಳದಲ್ಲಿ ಭಾಗವಹಿಸಿದವರು ಮತ್ತು ಭಕ್ತರಿಗೆ ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 16 MAR 2026 1:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮತುವಾ ಧರ್ಮ ಮೇಳದಲ್ಲಿ ಭಾಗವಹಿಸಿದ ಎಲ್ಲಾ ಭಕ್ತರು ಮತ್ತು ಭಾಗವಹಿಸುವವರಿಗೆ ಶುಭಾಶಯ ಕೋರಿದ್ದಾರೆ. ಈ ವಿಶೇಷ ಸಂದರ್ಭವು ಪೂರ್ಣ ಬ್ರಹ್ಮ ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿಯ ಜತೆ ಸಂಬಂಧ ಹೊಂದಿದೆ. "ನಾನು ಅವರಿಗೆ ನನ್ನ ವಿನಮ್ರ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಅವರ ಚಿಂತನೆಗಳು ಮತ್ತು ಬೋಧನೆಗಳು ಹಲವಾರು ಜನರಿಗೆ ಶಕ್ತಿ ಮತ್ತು ಭರವಸೆಯನ್ನು ನೀಡುತ್ತಲೇ ಇವೆ. ಅವರು ಘನತೆ, ಸಮಾನತೆ ಮತ್ತು ಭಕ್ತಿಗಾಗಿ ಶಕ್ತಿಯುತ ಚಳವಳಿಯನ್ನು ಜಾಗೃತಗೊಳಿಸಿದರು. ಅವರು ತಲೆಮಾರುಗಳನ್ನು ಸದಾಚಾರ, ಸಾಮರಸ್ಯ ಮತ್ತು ಸಾಮೂಹಿಕ ಉನ್ನತಿಯ ಹಾದಿಯಲ್ಲಿ ನಡೆಯಲು ಪ್ರೇರೇಪಿಸಿದರು", ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಮತುವಾ ಸಂಸ್ಕೃತಿಯ ಶ್ರೀಮಂತ ಮತ್ತು ರೋಮಾಂಚಕ ಸಂಪ್ರದಾಯಗಳು ಆಳವಾದ ಆಧ್ಯಾತ್ಮಿಕ ಶಕ್ತಿ ಮತ್ತು ಸಮಾನತೆಯ ಮುರಿಯಲಾಗದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಹೇಳಿದರು. ಇದು ನಮ್ಮ ರಾಷ್ಟ್ರದ ಸಾಮಾಜಿಕ ರಚನೆಯನ್ನು ಗಮನಾರ್ಹವಾಗಿ ಶ್ರೀಮಂತಗೊಳಿಸುತ್ತದೆ. "ಕಳೆದ ದಶಕದಲ್ಲಿ, ನಮ್ಮ ಸರ್ಕಾರವು ಮತುವಾ ಸಮುದಾಯದ ಕಲ್ಯಾಣ, ಸಬಲೀಕರಣ ಮತ್ತು ಘನತೆಗೆ ಆಳವಾಗಿ ಬದ್ಧವಾಗಿದೆ" ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ  ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ:

"ಎಲ್ಲಾ ಭಕ್ತರು ಮತ್ತು ಮತುವಾ ಧರ್ಮ ಮೇಳದಲ್ಲಿ ಭಾಗವಹಿಸುವವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.

ಈ ವಿಶೇಷ ಸಂದರ್ಭವು ಪೂರ್ಣ ಬ್ರಹ್ಮ ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿಯ ಜತೆ ಸಂಬಂಧ ಹೊಂದಿದೆ. ನಾನು ಅವರಿಗೆ ನನ್ನ ವಿನಮ್ರ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಅವರ ಚಿಂತನೆಗಳು ಮತ್ತು ಬೋಧನೆಗಳು ಹಲವಾರು ಜನರಿಗೆ ಶಕ್ತಿ ಮತ್ತು ಭರವಸೆಯನ್ನು ನೀಡುತ್ತಲೇ ಇವೆ. ಅವರು ಘನತೆ, ಸಮಾನತೆ ಮತ್ತು ಭಕ್ತಿಗಾಗಿ ಶಕ್ತಿಯುತ ಚಳವಳಿಯನ್ನು ಜಾಗೃತಗೊಳಿಸಿದರು. ಅವರು ತಲೆಮಾರುಗಳನ್ನು ಸದಾಚಾರ, ಸಾಮರಸ್ಯ ಮತ್ತು ಸಾಮೂಹಿಕ ಉನ್ನತಿಯ ಹಾದಿಯಲ್ಲಿ ನಡೆಯಲು ಪ್ರೇರೇಪಿಸಿದರು.

ಮತುವಾ ಸಂಸ್ಕೃತಿಯ ಶ್ರೀಮಂತ ಮತ್ತು ರೋಮಾಂಚಕ ಸಂಪ್ರದಾಯಗಳು ಆಳವಾದ ಆಧ್ಯಾತ್ಮಿಕ ಶಕ್ತಿ ಮತ್ತು ಸಮಾನತೆಯ ಅವಿನಾಭಾವ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. ಇದು ನಮ್ಮ ರಾಷ್ಟ್ರದ ಸಾಮಾಜಿಕ ರಚನೆಯನ್ನು ಗಮನಾರ್ಹವಾಗಿ ಶ್ರೀಮಂತಗೊಳಿಸುತ್ತದೆ. ಕಳೆದ ದಶಕದಲ್ಲಿ, ನಮ್ಮ ಸರ್ಕಾರವು ಮತುವಾ ಸಮುದಾಯದ ಕಲ್ಯಾಣ, ಸಬಲೀಕರಣ ಮತ್ತು ಘನತೆಗೆ ಆಳವಾಗಿ ಬದ್ಧವಾಗಿದೆ." 

“মতুয়া ধর্মমেলায় আগত সমস্ত ভক্ত এবং অংশগ্রহণকারীদের জানাই আমার আন্তরিক শুভেচ্ছা ও অভিনন্দন।

এই বিশেষ তিথিটি পূর্ণ ব্রহ্ম শ্রী শ্রী হরিচাঁদ ঠাকুরজির জয়ন্তীর সঙ্গে যুক্ত। আমি তাঁকে আমার সশ্রদ্ধ প্রণাম নিবেদন করছি। তাঁর আদর্শ এবং শিক্ষা আজও অগণিত মানুষকে শক্তি ও আশার আলো দিয়ে চলেছে এবং সম্মান, সাম্য ও ভক্তির এক শক্তিশালী আন্দোলনের জন্ম ঘটিয়েছে। তিনি প্রজন্ম থেকে প্রজন্মান্তরকে ন্যায়ের পথ, সম্প্রীতি এবং সমষ্টিগত উন্নয়নের পথে চলার অনুপ্রেরণা জুগিয়েছেন।

মতুয়া সংস্কৃতির এই সমৃদ্ধ এবং প্রাণবন্ত ঐতিহ্য এক গভীর আধ্যাত্মিক শক্তি এবং সাম্যের প্রতি অটুট অঙ্গীকারকে প্রতিফলিত করে। এটি আমাদের দেশের সামাজিক কাঠামোকে উল্লেখযোগ্যভাবে সমৃদ্ধ করেছে। গত এক দশকে, আমাদের সরকার মতুয়া সম্প্রদায়ের কল্যাণ, ক্ষমতায়ন এবং মর্যাদার প্রতি সম্পূর্ণ দায়বদ্ধ থেকে কাজ করে চলেছে।”

 

*****


(ಪ್ರಕಟಣೆ ಐ.ಡಿ.: 2241891) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Bengali-TR , Manipuri , Punjabi , Gujarati , Odia , Tamil