ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಶ್ರೀಲಂಕಾ ಅಧ್ಯಕ್ಷರ ದೂರವಾಣಿ ಸಂಭಾಷಣೆ


ಜಾಗತಿಕ ಇಂಧನ ಭದ್ರತೆಯ ಮೇಲೆ ಪರಿಣಾಮ ಬೀರುವ ಅಡೆತಡೆಗಳ ಕುರಿತು ಉಭಯ ನಾಯಕರ ಚರ್ಚೆ

ಹಡಗು ಮಾರ್ಗಗಳನ್ನು ಮುಕ್ತ ಮತ್ತು ಸುರಕ್ಷಿತವಾಗಿಡುವ ಮಹತ್ವದ ಬಗ್ಗೆ ಇಬ್ಬರೂ ನಾಯಕರಿಂದ ಪುನರುಚ್ಚಾರ
 
ಉಭಯ ನಾಯಕರಿಂದ ದ್ವಿಪಕ್ಷೀಯ ಇಂಧನ ಸಹಕಾರ ಬಲಪಡಿಸುವ ಮತ್ತು ಪ್ರಾದೇಶಿಕ ಭದ್ರತೆ ಹೆಚ್ಚಿಸುವ ಗುರಿ ಹೊಂದಿರುವ ವಿವಿಧ ಉಪಕ್ರಮಗಳ ಪ್ರಗತಿ ಪರಾಮರ್ಶೆ

ಹಂಚಿತ ಸವಾಲುಗಳನ್ನು ಎದುರಿಸಲು ನಿಕಟವಾಗಿ ಕೆಲಸ ಮಾಡುವ ಭಾರತದ ದೃಢ ಬದ್ಧತೆ ಪ್ರಧಾನಮಂತ್ರಿಗಳಿಂದ ಪುನರುಚ್ಚಾರ

ಪ್ರಕಟಣಾ ದಿನಾಂಕ: 24 MAR 2026 9:10PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾದ ಅಧ್ಯಕ್ಷರಾದ ಮಾನ್ಯ ಅನುರ ಕುಮಾರ ದಿಸ್ಸಾನಾಯಕ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಬೆಳವಣಿಗೆಗಳ ಕುರಿತು ಉಭಯ ನಾಯಕರು ಚರ್ಚಿಸಿದರು. ಜಾಗತಿಕ ಇಂಧನ ಭದ್ರತೆಯ ಮೇಲೆ ಪರಿಣಾಮ ಬೀರುವ ಅಡೆತಡೆಗಳ ಬಗ್ಗೆ ಅವರು ಚರ್ಚೆಯಲ್ಲಿ ಒತ್ತು ನೀಡಿದರು.

ಇಡೀ ಜಗತ್ತಿನ ಹಿತಾಸಕ್ತಿಗಾಗಿ ಹಡಗು ಮಾರ್ಗಗಳನ್ನು ಮುಕ್ತ ಮತ್ತು ಸುರಕ್ಷಿತವಾಗಿಡುವ ಮಹತ್ವವನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.

ಇಬ್ಬರೂ ನಾಯಕರು ಭಾರತ - ಶ್ರೀಲಂಕಾ ಇಂಧನ ಸಹಕಾರವನ್ನು ಬಲಪಡಿಸುವ ಮತ್ತು ಪ್ರಾದೇಶಿಕ ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಿವಿಧ ಉಪಕ್ರಮಗಳ ಪ್ರಗತಿ ಪರಾಮರ್ಶೆ ನಡೆಸಿದರು. 

ಭಾರತದ “ನೆರೆಹೊರೆ ಮೊದಲು” ನೀತಿ ಮತ್ತು “ಮಹಾಸಾಗರ್” ಮುನ್ನೋಟಕ್ಕೆ ಅನುಗುಣವಾಗಿ ಹಂಚಿತ ಸವಾಲುಗಳನ್ನು ಎದುರಿಸಲು ಒಟ್ಟಾಗಿ ನಿಕಟವಾಗಿ ಕೆಲಸ ಮಾಡುವ ಭಾರತದ ದೃಢ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ಪರಸ್ಪರ ಸಂಪರ್ಕದಲ್ಲಿರಲು ಎರಡೂ ದೇಶಗಳ ನಾಯಕರು ಸಮ್ಮತಿಸಿದರು.

 

*****


(ಪ್ರಕಟಣೆ ಐ.ಡಿ.: 2244860) ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Assamese , Gujarati