ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 10 MAY 2026 11:10AM by PIB Bengaluru

ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಪ್ರಧಾನಮಂತ್ರಿ ಅವರು ಹೊಸ ಅಧಿಕಾರಾವಧಿಗೆ ಶುಭ ಹಾರೈಸಿದರು ಮತ್ತು ರಾಜ್ಯದ ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ತಮಿಳುನಾಡು ಸರ್ಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಅಧಿಕಾರಾವಧಿಗೆ ಶುಭ ಹಾರೈಕೆಗಳು. ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ.

@TVKVijayHQ"

 

*****


(ಪ್ರಕಟಣೆ ಐ.ಡಿ.: 2259522) ವಿಸಿಟರ್ ಕೌಂಟರ್ : 10