ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನ ಮಂತ್ರಿ ರಾಷ್ಟ್ರೀ.ಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

प्रविष्टि तिथि: 06 JUN 2026 6:22PM by PIB Bengaluru

ಪಂಜಾಬ್‌ ರಾಜ್ಯದ ಫಿರೋಜ್‌ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಅಪಘಾತ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಅವರು ಸಂತಾಪ ಸೂಚಿಸಿದರು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF) ಯಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗುವುದು ಎಂದು ಶ್ರೀ ಮೋದಿ ಘೋಷಿಸಿದರು. ಅಲ್ಲದೆ, ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೆರವು ನೀಡಲಾಗುವುದು ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ಸಂಭವಿಸಿದ ದುರ್ಘಟನೆಯ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತಪಟ್ಟ ಪ್ರತಿಯೊಬ್ಬರ ಸಮೀಪ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು. ಪ್ರಧಾನಮಂತ್ರಿ @narendramodi

 

*****


(रिलीज़ आईडी: 2270101) आगंतुक पटल : 7
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Manipuri , Assamese , Punjabi , Gujarati , Tamil , Telugu , Malayalam