ಗೃಹ ವ್ಯವಹಾರಗಳ ಸಚಿವಾಲಯ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ದೇಶವು ಮೊದಲ ಬಾರಿಗೆ ಬಡವರ ಕಲ್ಯಾಣ ಮತ್ತು ಅಭೂತಪೂರ್ವ ಅಭಿವೃದ್ಧಿಯ ಸಮಾನಾಂತರ ರಹಿತ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾಗಿದೆ: ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಕಳೆದ 12 ವರ್ಷಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶ ಮತ್ತು ಅದರ ನಾಗರಿಕರಿಗೆ ಅವಿಶ್ರಾಂತವಾಗಿ ಸೇವೆ ಸಲ್ಲಿಸಿದ್ದಾರೆ
ನಾಯಕತ್ವವು ಸ್ಪಷ್ಟ ಉದ್ದೇಶ, ರಾಷ್ಟ್ರೀಯ ಹಿತಾಸಕ್ತಿಯನ್ನು ಗುರಿಯಾಗಿಟ್ಟುಕೊಂಡು ಸಂಪೂರ್ಣ ಸಮರ್ಪಣೆಯನ್ನು ಹೊಂದಿದ್ದಾಗ ಮಾತ್ರ ಅಂತಹ ಪರಿವರ್ತನೆ ಸಾಧ್ಯ
प्रविष्टि तिथि:
09 JUN 2026 12:46PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಕಳೆದ 12 ವರ್ಷಗಳಲ್ಲಿ ಕಲ್ಯಾಣ, ಮೂಲಸೌಕರ್ಯ, ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಹೇಳಿದರು.
"ಈ ದಿನ, ಶ್ರೀ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಅವರ ನಾಯಕತ್ವದಲ್ಲಿ, ಕಳೆದ 12 ವರ್ಷಗಳಲ್ಲಿ, ದೇಶವು ಮೊದಲ ಬಾರಿಗೆ ಬಡವರ ಕಲ್ಯಾಣ ಮತ್ತು ಅಭೂತಪೂರ್ವ ಅಭಿವೃದ್ಧಿಯ ಸಮಾನಾಂತರ ರಹಿತ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾಗಿದೆ. ಅದು 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸುತ್ತಿರುವುದಿರಲಿ, 90 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳು ಮತ್ತು ದೇಶಾದ್ಯಂತ 140ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಿರುವುದಿರಲಿ; 4 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಪಕ್ಕಾ ಮನೆಗಳನ್ನು ಒದಗಿಸುತ್ತಿರುವುದಿರಲಿ ಅಥವಾ 1.45 ಲಕ್ಷ ಕಿಲೋಮೀಟರ್ ರಸ್ತೆಗಳು ಮತ್ತು 3,000 ಕಿಲೋಮೀಟರ್ ಗೂ ಹೆಚ್ಚು ಆಧುನಿಕ ಎಕ್ಸ್ ಪ್ರೆಸ್ ವೇಗಳನ್ನು ನಿರ್ಮಿಸುತ್ತಿರುವುದಿರಲಿ; 50 ಕೋಟಿ ಜನರಿಗೆ ₹5 ಲಕ್ಷದ ಆರೋಗ್ಯ ವಿಮಾ ರಕ್ಷಣೆಯನ್ನು ಮತ್ತು 10 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕಗಳನ್ನು ಒದಗಿಸುತ್ತಿರುವುದಿರಲಿ, ಅಥವಾ ಭಾರತವನ್ನು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯನ್ನಾಗಿ ಮಾಡುತ್ತಿರುವುದಿರಲಿ, ಮೋದಿ ಅವರು ಕಳೆದ 12 ವರ್ಷಗಳಲ್ಲಿ ಒಂದೇ ಒಂದು ದಿನವೂ ರಜೆ ತೆಗೆದುಕೊಳ್ಳದೆ ರಾಷ್ಟ್ರ ಮತ್ತು ಅದರ ನಾಗರಿಕರಿಗೆ ಅವಿಶ್ರಾಂತವಾಗಿ ಸೇವೆ ಸಲ್ಲಿಸಿದ್ದಾರೆ. ನಾಯಕತ್ವವು ಸ್ಪಷ್ಟ ಉದ್ದೇಶ, ರಾಷ್ಟ್ರೀಯ ಹಿತಾಸಕ್ತಿಯನ್ನು ಗುರಿಯಾಗಿಟ್ಟುಕೊಂಡು ಮತ್ತು ಸಂಪೂರ್ಣ ಸಮರ್ಪಣೆಯನ್ನು ಹೊಂದಿರುವಾಗ ಮಾತ್ರ ಅಂತಹ ಪರಿವರ್ತನೆ ಸಾಧ್ಯ."
*****
(रिलीज़ आईडी: 2270661)
आगंतुक पटल : 13
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali
,
Bengali-TR
,
Assamese
,
Gujarati
,
Odia
,
Tamil
,
Telugu
,
Malayalam