ಪ್ರಧಾನ ಮಂತ್ರಿಯವರ ಕಛೇರಿ
ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಅತ್ಯಂತ ದೊಡ್ಡ ಪರೀಕ್ಷೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಗಳಿಸುವ ಮಾರ್ಗ ಎಂಬುದನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
10 JUN 2026 11:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಅತ್ಯಂತ ದೊಡ್ಡ ಪರೀಕ್ಷೆ ಎಂಬುದನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವೊಂದನ್ನು ಇಂದು ಹಂಚಿಕೊಂಡಿದ್ದಾರೆ. ನಮ್ರತೆ, ಸಮರ್ಪಣಾ ಭಾವ ಮತ್ತು ಕರ್ತವ್ಯ ನಿಷ್ಠೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಸಾರ್ವಜನಿಕರ ನಂಬಿಕೆಯನ್ನು ಗಳಿಸುತ್ತಾನೆ ಎಂದು ಪ್ರಧಾನಮಂತ್ರಿಯವರು ಉಲ್ಲೇಖಿಸಿದ್ದಾರೆ.
ಪ್ರಧಾನ ಮಂತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:
"जनसेवा ही सुशासन की सबसे बड़ी कसौटी है। विनम्रता, समर्पण और कर्तव्यनिष्ठा के साथ निरंतर कार्य करने वाला व्यक्ति ही जनविश्वास अर्जित करता है।
सदानुरक्तप्रकृतिः प्रजापालनतत्परः।
विनीतात्मा हि नृपतिर्भूयसी श्रियमश्नुते॥"
ಸೇವೆಯನ್ನು ಪವಿತ್ರ ಕರ್ತವ್ಯವೆಂದು ಪರಿಗಣಿಸಿ, ಜನರ ಕಲ್ಯಾಣಕ್ಕಾಗಿ ಅವಿಶ್ರಾಂತವಾಗಿ ಶ್ರಮಿಸಿ, ಉತ್ತಮ ಆಡಳಿತದ ಮೂಲಕ ಅವರ ಭದ್ರತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸಿ, ನಮ್ರತೆ, ಸ್ವಯಂ ಶಿಸ್ತು ಮತ್ತು ಅಭಿವೃದ್ಧಿಯ ಬದ್ಧತೆಯೊಂದಿಗೆ ಸಮಾಜದ ಪ್ರಗತಿಗೆ ಸಮರ್ಪಿತನಾಗಿ ಉಳಿಯುವ ಜನಪ್ರತಿನಿಧಿಯು ನಿಜವಾಗಿಯೂ ಜನರ ವಿಶ್ವಾಸ, ಗೌರವ, ಮನ್ನಣೆ ಮತ್ತು ಸಮೃದ್ಧಿಯನ್ನು ಗಳಿಸುತ್ತಾನೆ.
*****
(रिलीज़ आईडी: 2271247)
आगंतुक पटल : 11
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam