ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ
ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿಕ್ರಮಣ ಮತ್ತು ಅನಧಿಕೃತ ಪಾರ್ಕಿಂಗ್ ವಿರುದ್ಧ ಕಾನೂನಾತ್ಮಕ ಕ್ರಮಗಳನ್ನು ತೀವ್ರಗೊಳಿಸಿದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್.ಹೆಚ್.ಎ.ಐ)
प्रविष्टि तिथि:
24 JUN 2026 4:02PM by PIB Bengaluru
ರಸ್ತೆ ಸುರಕ್ಷತೆಯನ್ನು ಬಲಪಡಿಸುವ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಡೆತಡೆಯಿಲ್ಲದ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪ್ರಮುಖ ಉಪಕ್ರಮದಲ್ಲಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್.ಹೆಚ್.ಎ.ಐ) ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ಗಳಲ್ಲಿ ಅನಧಿಕೃತ ಪಾರ್ಕಿಂಗ್ ಮತ್ತು ಅತಿಕ್ರಮಣಗಳನ್ನು ತಡೆಯಲು ಕಾನೂನಾತ್ಮಕ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಗೌರವಾನ್ವಿತ ಸುಪ್ರೀಂ ಕೋರ್ಟ್ನ ನಿರ್ದೇಶನಗಳಿಗೆ ಅನುಸಾರವಾಗಿ ಈ ಉಪಕ್ರಮವನ್ನು ಕೈಗೊಳ್ಳಲಾಗುತ್ತಿದೆ ಮತ್ತು ಸುರಕ್ಷಿತ, ಹೆಚ್ಚು ಪರಿಣಾಮಕಾರಿ ಮತ್ತು ಬಳಕೆದಾರ ಸ್ನೇಹಿ ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯವನ್ನು ಸೃಷ್ಟಿಸುವ ಕಡೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್.ಹೆಚ್.ಎ.ಐ) ನಿರಂತರ ಬದ್ಧತೆಯ ಭಾಗವಾಗಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅನಧಿಕೃತ ಪಾರ್ಕಿಂಗ್, ರಸ್ತೆಬದಿಯ ಅತಿಕ್ರಮಣ ಮತ್ತು ಅನಿಯಂತ್ರಿತ ಚಟುವಟಿಕೆಗಳು ರಸ್ತೆ ಬಳಕೆದಾರರಿಗೆ ಗಮನಾರ್ಹ ಅಪಾಯಗಳನ್ನು ಉಂಟುಮಾಡುತ್ತವೆ ಮತ್ತು ಸಂಚಾರ ಹರಿವು ಹಾಗೂ ಸುರಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಈ ಸವಾಲುಗಳನ್ನು ಎದುರಿಸಲು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್.ಹೆಚ್.ಎ.ಐ) ವಿವಿಧ ರಾಜ್ಯಗಳಲ್ಲಿ ಅನಧಿಕೃತ ಪಾರ್ಕಿಂಗ್ನ 595 ನಿರ್ಣಾಯಕ ಸ್ಥಳಗಳನ್ನು (ರೇಖಾಂಶ ಮತ್ತು ಅಕ್ಷಾಂಶ ವಿವರಗಳೊಂದಿಗೆ) ಗುರುತಿಸಿದೆ ಮತ್ತು ರಾಷ್ಟ್ರೀಯ ಹೆದ್ದಾರಿಗಳಿಂದ ಅನಧಿಕೃತ ಪಾರ್ಕಿಂಗ್ ತೆಗೆದುಹಾಕಲು ರಾಜ್ಯ ಸರ್ಕಾರಗಳು, ಜಿಲ್ಲಾಡಳಿತಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಇದರ ಜೊತೆಗೆ, 'ರಾಷ್ಟ್ರೀಯ ಹೆದ್ದಾರಿಗಳ ನಿಯಂತ್ರಣ (ಭೂಮಿ ಮತ್ತು ಸಂಚಾರ) ಕಾಯ್ದೆ, 2002' ರ ನಿಬಂಧನೆಗಳ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ಗಳಿಂದ ಅತಿಕ್ರಮಣಗಳನ್ನು ತೆಗೆದುಹಾಕಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್.ಹೆಚ್.ಎ.ಐ) ಸಂಘಟಿತ ಪ್ರಯತ್ನಗಳನ್ನು ಕೈಗೊಂಡಿದೆ. ಸಾಂಸ್ಥಿಕ ಸಮನ್ವಯವನ್ನು ಮತ್ತಷ್ಟು ಬಲಪಡಿಸಲು, ಜಿಲ್ಲಾ ಹೆದ್ದಾರಿ ಸುರಕ್ಷತಾ ಕಾರ್ಯಪಡೆಗಳನ್ನು ಸ್ಥಾಪಿಸಲು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಹಾಗೂ ಅಂತರ-ಏಜೆನ್ಸಿ ಸಮನ್ವಯವನ್ನು ಸುಗಮಗೊಳಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್.ಹೆಚ್.ಎ.ಐ) ರಾಜ್ಯ ಸರ್ಕಾರಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಯವಿಧಾನಗಳು ಸಕಾಲಿಕ ಜಾರಿ ಕ್ರಮವನ್ನು ಬೆಂಬಲಿಸುತ್ತವೆ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಲದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳ ನಿರಂತರ ಮೇಲ್ವಿಚಾರಣೆಯನ್ನು ಸಕ್ರಿಯಗೊಳಿಸುತ್ತವೆ.
ಇದರ ಜೊತೆಗೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್.ಹೆಚ್.ಎ.ಐ) ತನ್ನ ಕ್ಷೇತ್ರ ಕಚೇರಿಗಳಿಗೆ ಎಲ್ಲಾ ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆ (ಎ.ಟಿ.ಎಂ.ಎಸ್) ಸ್ಥಾಪನೆಗಳ ತಕ್ಷಣದ ಲೆಕ್ಕಪರಿಶೋಧನೆಯನ್ನು ಕೈಗೊಳ್ಳಲು ಮತ್ತು ಸಂಚಾರ ಮಾನಿಟರಿಂಗ್ ಕ್ಯಾಮೆರಾಗಳು, ವೀಡಿಯೊ ಘಟನೆ ಪತ್ತೆ ವ್ಯವಸ್ಥೆಗಳು, ವ್ಯತ್ಯಯ ವೇಗ ಪತ್ತೆ ವ್ಯವಸ್ಥೆಗಳು, ವ್ಯತ್ಯಯ ಸಂದೇಶ ಫಲಕಗಳು ಮತ್ತು ತುರ್ತು ಕರೆ ಪೆಟ್ಟಿಗೆಗಳಂತಹ ಘಟಕಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಲು ನಿರ್ದೇಶಿಸಿದೆ. ಅಲ್ಲದೆ, ಆಂಬ್ಯುಲೆನ್ಸ್ಗಳು ಮತ್ತು ರಿಕವರಿ ವಾಹನಗಳ (Recovery vehicles) ನಿಯೋಜನೆ, ವರ್ಧಿತ ಹೆದ್ದಾರಿ ಗಸ್ತು, ಜಾರಿ ಸಂಸ್ಥೆಗಳೊಂದಿಗೆ ಎ.ಟಿ.ಎಂ.ಎಸ್ ಎಚ್ಚರಿಕೆಗಳ ಏಕೀಕರಣ ಮತ್ತು ಸುರಕ್ಷತಾ ಮೂಲಸೌಕರ್ಯದ ಪೂರ್ವಭಾವಿ ನಿರ್ವಹಣೆಗೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ವೇಗವಾದ ಘಟನೆ ಪ್ರತಿಕ್ರಿಯೆ, ಸುಧಾರಿತ ಜಾರಿ ಮತ್ತು ಸುರಕ್ಷಿತ ಪ್ರಯಾಣವನ್ನು ಸಕ್ರಿಯಗೊಳಿಸಲು ಆದ್ಯತೆ ನೀಡಲಾಗುತ್ತಿದೆ.
ದೇಶಾದ್ಯಂತ ಸುಗಮ ಪ್ರಯಾಣಿಕ ಮತ್ತು ಸರಕು ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಜಾರಿಗೊಳಿಸುವಿಕೆಯನ್ನು ಬಲಪಡಿಸುವ ಮೂಲಕ ಸುರಕ್ಷಿತ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್.ಹೆಚ್.ಎ.ಐ) ಬದ್ಧತೆಯನ್ನು ಈ ಉಪಕ್ರಮವು ಪ್ರತಿಬಿಂಬಿಸುತ್ತದೆ.
******
(रिलीज़ आईडी: 2277541)
आगंतुक पटल : 11