ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಗುಜರಾತ್‌ನ ಗಾಂಧಿನಗರದಲ್ಲಿ 'ಪಿಎಂ ಫ್ಯಾಮಿಲಿ ಕೇರ್ ಟ್ರ್ಯಾಕರ್' ಪ್ರಾಯೋಗಿಕ ಯೋಜನೆ ಉದ್ಘಾಟಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಈ ವೇಳೆ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿದ ಸಚಿವರು


ದೀರ್ಘಾವಧಿಯ ನೀತಿಗಳನ್ನು ರೂಪಿಸುವ ಮೂಲಕ, ನಿರಂತರ ಮೇಲ್ವಿಚಾರಣೆ ಖಾತ್ರಿಪಡಿಸಿಕೊಳ್ಳುವ ಮೂಲಕ ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ತಳಮಟ್ಟದಲ್ಲಿ ಅನುಷ್ಠಾನಗೊಳಿಸುವ ಮೂಲಕ ಸಮಗ್ರ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗೆ ಮರು ವ್ಯಾಖ್ಯಾನ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಜನನ ಮತ್ತು ಮರಣ ನೋಂದಣಿ ದತ್ತಾಂಶದೊಂದಿಗೆ ಸಂಯೋಜಿಸಲ್ಪಟ್ಟ ಪಿಎಂ ಫ್ಯಾಮಿಲಿ ಕೇರ್ ಟ್ರ್ಯಾಕರ್ ಪ್ರತಿ ಮಗುವಿಗೆ ವಿಶಿಷ್ಟ ಐಡಿ ಒದಗಿಸುತ್ತದೆ, ಸರ್ಕಾರಿ ಯೋಜನೆಗಳ ಪ್ರಯೋಜನಗಳು ಅವರಿಗೆ ಸ್ವಯಂಚಾಲಿತವಾಗಿ ಮತ್ತು ಸಕಾಲಿಕವಾಗಿ ತಲುಪುವುದನ್ನು ಖಾತ್ರಿಪಡಿಸುತ್ತದೆ

ಫಲಾನುಭವಿ ಗುರುತಿಸುವುದು, ಸರ್ಕಾರಿ ಸಂಪರ್ಕ ಮತ್ತು ಕಲ್ಯಾಣ ಯೋಜನೆಗಳ ಪರಿಣಾಮಕಾರಿ ವಿತರಣೆಯ ಪ್ರಮುಖ ಸವಾಲುಗಳಿಗೆ ಪಿಎಂ ಫ್ಯಾಮಿಲಿ ಕೇರ್ ಟ್ರ್ಯಾಕರ್ ಪರಿಹಾರ

ಸಮಗ್ರ ಮೇಲ್ವಿಚಾರಣಾ ವ್ಯವಸ್ಥೆಯ ಮೂಲಕ, ಪಿಎಂ ಫ್ಯಾಮಿಲಿ ಕೇರ್ ಟ್ರ್ಯಾಕರ್ ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಅಗತ್ಯವಿರುವವರಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಖಾತ್ರಿ

ನೇರ ನಗದು ವರ್ಗಾವಣೆಯ ಮೂಲಕ ಬಡವರಿಗೆ ಪಾರದರ್ಶಕ ಮತ್ತು ಪರಿಣಾಮಕಾರಿ ಕಲ್ಯಾಣ ವಿತರಣೆಗಾಗಿ ಹೊಸ ಚೌಕಟ್ಟು ಸ್ಥಾಪಿಸಿದ ಮೋದಿ ಸರ್ಕಾರ

ಕೇವಲ 12 ವರ್ಷಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರದಿಂದ ತಲೆಮಾರುಗಳಿಂದ ಬಡ ಕುಟುಂಬಗಳ ಮೇಲೆ ಪರಿಣಾಮ ಬೀರಿತ್ತಿದ್ದ ಹಲವಾರು ದೀರ್ಘಕಾಲೀನ ಸಮಸ್ಯೆಗಳ ಪರಿಹಾರ

प्रविष्टि तिथि: 28 JUN 2026 9:51PM by PIB Bengaluru

 

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರದಲ್ಲಿಂದು 'ಪಿಎಂ ಫ್ಯಾಮಿಲಿ ಕೇರ್ ಟ್ರ್ಯಾಕರ್' ಪ್ರಾಯೋಗಿಕ ಯೋಜನೆಯನ್ನು ಉದ್ಘಾಟಿಸಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ಗೃಹ ಕಾರ್ಯದರ್ಶಿ ಶ್ರೀ ಗೋವಿಂದ್ ಮೋಹನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಸ್ವಾತಂತ್ರ್ಯದ ನಂತರ ಭಾರತದ 100 ವರ್ಷಗಳ ಇತಿಹಾಸವನ್ನು ಯಾರಾದರೂ ಬರೆದಾಗ ಆ ಇತಿಹಾಸವು ಎರಡು ಭಾಗಗಳನ್ನು ಹೊಂದಿರುತ್ತದೆ ಎಂದು ಹೇಳಿದರು. ಮೊದಲ ಭಾಗವು 2014 ರ ಮೊದಲು ಭಾರತ ಮತ್ತು ಎರಡನೇ ಭಾಗವು 2014 ರ ನಂತರದ ಭಾರತವಾಗಿರುತ್ತದೆ. 2014 ರ ಚುನಾವಣೆಯಲ್ಲಿ ಭಾರತದ ಜನರು ಅಂದಿನ ಗುಜರಾತ್ ಮುಖ್ಯಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರನ್ನು ದೇಶದ ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದರು. 2014 ರ ನಂತರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಪ್ರತಿಯೊಂದು ವಲಯದಲ್ಲಿಯೂ ಭಾರಿ ಪರಿವರ್ತನೆಯಾಗಿದೆ ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರದ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಯ ಹೊಸ ವ್ಯಾಖ್ಯಾನವನ್ನು ಸೃಷ್ಟಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರವು ಪ್ರತಿಯೊಂದು ವಲಯದಲ್ಲಿ ದೀರ್ಘಾವಧಿಯ ನೀತಿಗಳನ್ನು ರೂಪಿಸುವುದಲ್ಲದೆ, ಅವುಗಳನ್ನು ಮೇಲ್ವಿಚಾರಣೆ ಮಾಡಿದೆ ಮತ್ತು ಅವುಗಳ ಪರಿಣಾಮಕಾರಿ ಜಾರಿಯನ್ನು ಖಾತ್ರಿಪಡಿಸಿಕೊಂಡಿದೆ ಎಂದು ಶ್ರೀ ಶಾ ಹೇಳಿದರು. ದೇಶದ ಭದ್ರತೆಯನ್ನು ಬಲಪಡಿಸಲು, ಅದರ ಸಂಸ್ಕೃತಿಯನ್ನು ಸಂರಕ್ಷಿಸಲು, ಶಿಕ್ಷಣ ನೀತಿಯನ್ನು ಜಾರಿಗೆ ತರಲು, ಆರ್ಥಿಕತೆಯನ್ನು ವೃದ್ಧಿಸಲು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಸ್ವಾವಲಂಬನೆಯತ್ತ ಮುನ್ನಡೆಯಲು ಮತ್ತು ಅವುಗಳಲ್ಲಿ ಸಕಾಲಿಕ ಸುಧಾರಣೆಗಳನ್ನು ಮಾಡುವಾಗ ಪ್ರತಿಯೊಂದು ವಲಯದಲ್ಲಿ ನೀತಿಗಳನ್ನು ರೂಪಿಸಲು ಸಹ ಕೆಲಸ ಮಾಡಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಕೋಟ್ಯಂತರ ಬಡ ಜನರ ಜೀವನ ಮಟ್ಟವನ್ನು ಉನ್ನತೀಕರಿಸಲು ಸಮಗ್ರ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಶ್ರೀ ಅಮಿತ್ ಶಾ ಹೇಳಿದರು. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಬಡವರಿಗಾಗಿ ಎಷ್ಟೇ ಹಣವನ್ನು ಕಳುಹಿಸಿದರೂ, ಸಂಪೂರ್ಣ ಮೊತ್ತವು ನೇರವಾಗಿ ಅವರನ್ನು ತಲುಪುತ್ತದೆ. ನೇರ ನಗದು ವರ್ಗಾವಣೆ (ಡಿಬಿಟಿ) ಪರಿಚಯಿಸುವ ಮೂಲಕ ಮೋದಿ ಸರ್ಕಾರ ಬಡವರಿಗೆ ಕಲ್ಯಾಣದ ಹೊಸ ಯುಗಕ್ಕೆ ನಾಂದಿ ಹಾಡಿದೆ. ಕೇವಲ 12 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರವು ಮನೆಗಳು, ವಿದ್ಯುತ್, ಕೊಳಾಯಿ ನೀರು, ಶೌಚಾಲಯಗಳು, ಗ್ಯಾಸ್ ಸಿಲಿಂಡರ್‌ಗಳು, 5 ಕೆಜಿ ಉಚಿತ ಆಹಾರ ಧಾನ್ಯಗಳು, 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ದೇಶಾದ್ಯಂತ ಕೋಟ್ಯಂತರ ಬಡ ಜನರಿಗೆ ಶೇಕಡ 90 ರಷ್ಟು ಔಷಧಿಗಳನ್ನು ರಿಯಾಯಿತಿ ದರದಲ್ಲಿ  ಕೈಗೆಟುಕುವ ವ್ಯವಸ್ಥೆ ಮಾಡಿದೆ ಎಂದರು.

ಸ್ವಾತಂತ್ರ್ಯದ ನಂತರ ಸ್ವತಂತ್ರ ಭಾರತದಲ್ಲಿ ತಮ್ಮ ಹಕ್ಕನ್ನು ಪಡೆಯಲು ಶ್ರಮಿಸುತ್ತಿರುವ ಕೋಟ್ಯಂತರ ಜನರಿಗೆ ನರೇಂದ್ರ ಮೋದಿ ಸರ್ಕಾರವು ತಮ್ಮ ನ್ಯಾಯಯುತ ಪಾಲನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ದೇಶದ ಕೋಟ್ಯಂತರ ಜನರಲ್ಲಿ ತಲೆಮಾರುಗಳಿಂದ ಉಳಿದುಕೊಂಡಿದ್ದ ಸಮಸ್ಯೆಗಳನ್ನು ಪ್ರಧಾನಿ ನರೇಂದ್ರ ಮೋದಿ ಕೇವಲ 12 ವರ್ಷಗಳಲ್ಲಿ ಪರಿಹರಿಸಿದ್ದಾರೆ ಎಂದು ಅವರು ಹೇಳಿದರು.

ಸರ್ವರಿಗೂ ಆಡಳಿತವನ್ನು ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಇಂದು ಇಲ್ಲಿ ಪರಿಣಾಮಕಾರಿಯಾಗಿ ಆರಂಭವಾಗಿದೆ ಎಂದು ಶ್ರೀ ಅಮಿತ್ ಶಾ ಹೇಳಿದರು. ಇಂದು ಮಕ್ಕಳಿಗೆ ಪೋಲಿಯೊ ಹನಿಗಳನ್ನು ಹಾಕಲಾಯಿತು ಮತ್ತು ಪೌಷ್ಠಿಕಾಂಶ ಕಿಟ್‌ಗಳನ್ನು ಸಹ ವಿತರಿಸಲಾಯಿತು. ಈ ಸಂಪೂರ್ಣ ದತ್ತಾಂಶವನ್ನು ಸಂಯೋಜಿಸುವ ಮೂಲಕ ಮತ್ತು ಜನನ ಮತ್ತು ಮರಣ ದತ್ತಾಂಶದೊಂದಿಗೆ ಲಿಂಕ್ ಮಾಡುವ ಮೂಲಕ ಪ್ರತಿ ಮಗುವಿಗೆ ಐಡಿ ಮತ್ತು ವಿಶಿಷ್ಟ ಸಂಖ್ಯೆಯನ್ನು ಒದಗಿಸುವ ಕಾರ್ಯವನ್ನು ಪಿಎಂ ಫ್ಯಾಮಿಲಿ ಕೇರ್ ಟ್ರ್ಯಾಕರ್ ಮೂಲಕ ಕೈಗೊಳ್ಳಲಾಗುವುದು. ಈ ವೇದಿಕೆಯ ಮೂಲಕ, ಎಲ್ಲಾ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ನೇರವಾಗಿ ತಲುಪಿಸಲಾಗುತ್ತದೆ. ಪಿಎಂ ಫ್ಯಾಮಿಲಿ ಟ್ರ್ಯಾಕರ್ ಸಮಗ್ರ ಮೇಲ್ವಿಚಾರಣಾ ವ್ಯವಸ್ಥೆಯನ್ನು ಮಾಡುತ್ತದೆ. ಅದರಡಿಯಲ್ಲಿ ಅಗತ್ಯವಿರುವ ವ್ಯಕ್ತಿಗಳನ್ನು ಗುರುತಿಸಲಾಗುತ್ತದೆ ಮತ್ತು ಅವರಿಗೆ ವಿಶೇಷ ಗಮನ ನೀಡಲಾಗುವುದು ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಪರಿವರ್ತನೆಯನ್ನು ತಂದಿದ್ದಾರೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಆರೋಗ್ಯ ರಕ್ಷಣಾ ಅಗತ್ಯಗಳಿಗೆ ಅನುಗುಣವಾಗಿ ಹಲವು ಉಪಕ್ರಮಗಳನ್ನು ಆರಂಭಿಸಿದ್ದಾರೆ, ಅವುಗಳಲ್ಲಿ ವೈದ್ಯರ ಲಭ್ಯತೆಯನ್ನು ವಿಸ್ತರಿಸುವುದು, ಕೋಟ್ಯಂತರ ನಾಗರಿಕರಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವುದು, ಕೈಗೆಟುಕುವ ಔಷಧಿಗಳನ್ನು ಲಭ್ಯವಾಗುವಂತೆ ಮಾಡುವುದು, ಆರೋಗ್ಯ ಮೂಲಸೌಕರ್ಯವನ್ನು ಬಲವರ್ಧನೆಗೊಳಿಸುವುದು ಮತ್ತು ಆಯುಷ್ ಮೂಲಕ ಭಾರತದ ಸಾಂಪ್ರದಾಯಿಕ ಆರೋಗ್ಯ ರಕ್ಷಣಾ ವ್ಯವಸ್ಥೆಗಳನ್ನು ಪುನರುಜ್ಜೀವನಗೊಳಿಸುವುದು ಸೇರಿವೆ. ಇಂದು ಈ ಎಲ್ಲಾ ಉಪಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಪಿಎಂ ಕುಟುಂಬ ಆರೈಕೆ ಟ್ರ್ಯಾಕರ್ ಅನ್ನು ಆರಂಭಿಸಲಾಗಿದೆ.

 

*****


(रिलीज़ आईडी: 2278722) आगंतुक पटल : 9
इस विज्ञप्ति को इन भाषाओं में पढ़ें: English , हिन्दी , Gujarati , Odia , Malayalam