ಪ್ರಧಾನ ಮಂತ್ರಿಯವರ ಕಛೇರಿ
ಲೋಕಮಾನ್ಯ ತಿಲಕ್ ಅವರ ಜನ್ಮ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
23 JUL 2026 8:12AM by PIB Bengaluru
ಲೋಕಮಾನ್ಯ ತಿಲಕ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅವರಿಗೆ ಗೌರವ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟದ ಅತ್ಯುನ್ನತ ವ್ಯಕ್ತಿಯಾಗಿ, ಲೋಕಮಾನ್ಯ ತಿಲಕರು ರಾಷ್ಟ್ರೀಯತೆಯ ಚೈತನ್ಯವನ್ನು ಜಾಗೃತಗೊಳಿಸಿ, ಅವರ ಮುಂದಿನ ಪೀಳಿಗೆಯವರು ಜನರ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಪ್ರೇರೇಪಿಸಿದರು ಎಂದು ಹೇಳಿದರು.
ನಮ್ಮ ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಮತ್ತು ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ಲೋಕಮಾನ್ಯ ತಿಲಕರ ಪ್ರಯತ್ನಗಳು ಕೂಡಾ ಸ್ಪೂರ್ತಿದಾಯಕವಾಗಿವೆ ಎಂದು ಪ್ರಧಾನಿಯವರು ತಿಳಿಸಿದರು. ಅವರ ಬರಹಗಳು ಜನರಿಗೆ ಹೊಸ ಆತ್ಮವಿಶ್ವಾಸವನ್ನು ನೀಡಿ, ಹೆಮ್ಮೆಯ ಮನೋಭಾವವನ್ನು ಮೂಡಿಸಿದೆ ಎಂದು ಶ್ರೀ ಮೋದಿಯವರು ತಿಳಿಸಿದರು.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಲೋಕಮಾನ್ಯ ತಿಲಕರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು. ಭಾರತದ ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿದ ಅತ್ಯುನ್ನತ ವ್ಯಕ್ತಿಯಾಗಿದ್ದ ಅವರು ರಾಷ್ಟ್ರೀಯತೆಯ ಮನೋಭಾವವನ್ನು ಜಾಗೃತಗೊಳಿಸಿ, ಭವಿಷ್ಯದ ಪೀಳಿಗೆಗಳು ಜನರ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಪ್ರೇರೇಪಿಸಿದರು. ನಮ್ಮ ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಮತ್ತು ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ಅವರ ಪ್ರಯತ್ನಗಳು ಅಷ್ಟೇ ಸ್ಪೂರ್ತಿದಾಯಕವಾಗಿದ್ದವು. ಅವರ ಬರಹಗಳು ಜನರಿಗೆ ಹೊಸ ಆತ್ಮವಿಶ್ವಾಸವನ್ನು ನೀಡಿ, ಹೆಮ್ಮೆಯ ಮನೋಭಾವವನ್ನು ಹೆಚ್ಚಿಸಿದವು."
*****
(रिलीज़ आईडी: 2288353)
आगंतुक पटल : 7
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam