ಪ್ರಧಾನ ಮಂತ್ರಿಯವರ ಕಛೇರಿ
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿವರಿಸುವ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಲೇಖನ ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
15 AUG 2026 5:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾನ್ಯ ಉಪರಾಷ್ಟ್ರಪತಿ ಶ್ರೀ ಸಿ ಪಿ ರಾಧಾಕೃಷ್ಣನ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಲೇಖನವು ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸುತ್ತಿದೆ ಮತ್ತು ಮಾನ್ಯ ಉಪರಾಷ್ಟ್ರಪತಿಯವರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಭೇಟಿಯನ್ನು ನೆನಪಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಈ ಅಮೃತ ಕಾಲದಲ್ಲಿ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಲೇಖನ ಕರೆ ನೀಡಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"ಭಾರತ ತನ್ನ 80ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಮಾನ್ಯ @VPIndia ಶ್ರೀ @CPR_VP ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ತಮ್ಮ ಭೇಟಿಯನ್ನು ನೆನಪು ಮಾಡಿಕೊಳ್ಳುತ್ತಾ, ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿದ್ದಾರೆ.
ಈ ಅಮೃತ ಕಾಲದಲ್ಲಿ 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದ್ದಾರೆ."
*****
(रिलीज़ आईडी: 2300229)
आगंतुक पटल : 22
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam