ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿಆಗಿರುವ  ಪ್ರಾಣಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿಎಂಎನ್‌ಆರ್‌ಎಫ್ ನಿಂದ ಪರಿಹಾರ ಧನ ಘೋಷಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 SEP 2026 9:11AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ  ಅವರು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ತಮ್ಮ ಸಾಂತ್ವನವನ್ನು ತಿಳಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಪ್ರತಿಯೊಬ್ಬರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು.

ಪ್ರಧಾನಮಂತ್ರಿಯವರ ಕಚೇರಿ ತನ್ನ 'ಎಕ್ಸ್' ಪೋಸ್ಟ್‌ನಲ್ಲಿ ಹೀಗೆ ಹೇಳಿದೆ:

"ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವುದು ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಪ್ರತಿಯೊಬ್ಬರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು: PM @narendramodi”

 

*****


(ಪ್ರಕಟಣೆ ಐ.ಡಿ.: 2309055) ವಿಸಿಟರ್ ಕೌಂಟರ್ : 21