ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ
azadi ka amrit mahotsav

NCSC ಅಧ್ಯಕ್ಷರಾದ ಶ್ರೀ ಕಿಶೋರ್ ಮಕ್ವಾನಾ ಅವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಜನ ಸೇವಾ ಪ್ರಶಸ್ತಿ 2026 ಪ್ರದಾನ


ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ, ಈಶಾನ್ಯ ಪ್ರದೇಶದ ಶಿಕ್ಷಣ ಮತ್ತು ಅಭಿವೃದ್ಧಿ ರಾಜ್ಯ ಸಚಿವರಾದ ಡಾ. ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪ್ರದಾನ

ಮಕ್ವಾನಾ ಅವರ ಸಮರ್ಪಿತ ನಾಯಕತ್ವ, ಪರಿಶಿಷ್ಟ ಜಾತಿಗಳಿಗೆ ನ್ಯಾಯ ಹಕ್ಕುಗಳು ಮತ್ತು ಘನತೆಯನ್ನು ಭದ್ರಪಡಿಸಿಕೊಳ್ಳುವಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ

ಪ್ರಕಟಣಾ ದಿನಾಂಕ: 10 SEP 2026 5:56PM by PIB Bengaluru

ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ (NCSC) ಅಧ್ಯಕ್ಷರಾದ ಶ್ರೀ ಕಿಶೋರ್ ಮಕ್ವಾನಾ ಅವರ ಸಮರ್ಪಿತ ಸೇವೆ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವ ಕೊಡುಗೆಯನ್ನು ಗುರುತಿಸಿ ಪ್ರಸಕ್ತ ಸಾಲಿನ ಡಾ. ಎಪಿಜೆ ಅಬ್ದುಲ್ ಕಲಾಂ ಜನ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಷ್ಟ್ರೀಯ ರಾಜಧಾನಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ 16 ನೇ ಆವೃತ್ತಿಯ ಸಂಸದ್ ರತ್ನ ಪ್ರಶಸ್ತಿಗಳು 2026 ರ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಗೌರವಾನ್ವಿತ ಶ್ರೀ ಜಿ. ಕಿಶನ್ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿದ್ದರೆ, ಈಶಾನ್ಯ ಪ್ರದೇಶದ ಶಿಕ್ಷಣ ಮತ್ತು ಅಭಿವೃದ್ಧಿ ರಾಜ್ಯ ಸಚಿವರಾದ ಗೌರವಾನ್ವಿತ ಡಾ. ಸುಕಾಂತ ಮಜುಂದಾರ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀ ಹಂಸರಾಜ್ ಅಹಿರ್ ವಹಿಸಿದ್ದರು. ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಸದ್ ರತ್ನ ಪ್ರಶಸ್ತಿ ಸಮಿತಿಯ ತೀರ್ಪುಗಾರರು ರಾಷ್ಟ್ರಕ್ಕೆ ಆಯೋಗದ ಸಮರ್ಪಿತ ಸೇವೆ ಮತ್ತು ಸಾಮಾಜಿಕ ನ್ಯಾಯದ ಉದ್ದೇಶವನ್ನು ಗುರುತಿಸಿದರು.

ಪ್ರಶಸ್ತಿ ಪುರಸ್ಕಾರವು ಶ್ರೀ ಮಕ್ವಾನಾ ಅವರ ಸಮರ್ಪಿತ ಪ್ರಯತ್ನಗಳನ್ನು ಗುರುತಿಸಿತು ಮತ್ತು ಅವರ ನಾಯಕತ್ವದಲ್ಲಿ ಆಯೋಗಕ್ಕೆ ನೀಡಿದ ಗಮನಾರ್ಹ ಕೊಡುಗೆಯನ್ನು ಉಲ್ಲೇಖಿಸಿತು.

ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಅವರ ಸಮರ್ಪಿತ ಸೇವೆಗಾಗಿ ಶ್ರೀ ಮಕ್ವಾನಾ ಅವರನ್ನು ಪ್ರೈಮ್ ಪಾಯಿಂಟ್ ಫೌಂಡೇಶನ್ ಮತ್ತು ಸಂಸದ್ ರತ್ನ ಪ್ರಶಸ್ತಿ ಸಮಿತಿಯು ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.

ಶ್ರೀ ಕಿಶೋರ್ ಮಕ್ವಾನಾ ಅವರ ನೇತೃತ್ವದಲ್ಲಿ, ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಪರಿಶಿಷ್ಟ ಜಾತಿಗಳ ಸಾಂವಿಧಾನಿಕ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಕಾಪಾಡಲು ಬದ್ಧವಾಗಿರುವ ಪರಿಣಾಮಕಾರಿ ಸಂಸ್ಥೆಯಾಗಿ ತನ್ನ ಪಾತ್ರವನ್ನು ಬಲಪಡಿಸಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಸದಸ್ಯರಿಗೆ ನ್ಯಾಯ, ಹಕ್ಕುಗಳು, ಘನತೆ ಮತ್ತು ಸಾಮಾಜಿಕ ಸಬಲೀಕರಣವನ್ನು ಖಚಿತಪಡಿಸಿಕೊಳ್ಳಲು ಆಯೋಗವು ಸಕ್ರಿಯವಾಗಿ ಕೆಲಸ ಮಾಡಿದೆ.

ಈ ಗೌರವವು ಪರಿಶಿಷ್ಟ ಜಾತಿಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ದೇಶಾದ್ಯಂತ ಸಮಾನತೆ, ಘನತೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸಲು ಆಯೋಗದ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

 

*****


(ಪ್ರಕಟಣೆ ಐ.ಡಿ.: 2309068) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Telugu