ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವಕರ್ಮ ಜಯಂತಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ


ಭಗವಾನ್ ವಿಶ್ವಕರ್ಮ ನಿಗೆ ಸಂಬಂಧಿಸಿದ ಸಾರ್ವಕಾಲಿಕ ಜ್ಞಾನವನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 17 SEP 2026 11:14AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ದೇಶದ ಜನತೆಗೆ  ಶುಭ ಕೋರಿದ್ದಾರೆ. ದೇಶಾದ್ಯಂತ ನಿರ್ಮಾಣ ಮತ್ತು ಸೃಷ್ಟಿ ಕಾರ್ಯದಲ್ಲಿ ತೊಡಗಿರುವ ಕರ ಕುಶಲಕರ್ಮಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರಿಗೆ ಶ್ರೀ ನರೇಂದ್ರ ಮೋದಿ ಅವರು ವಿಶೇಷ ಶುಭಾಶಯ ಕೋರಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಕುಶಲಕರ್ಮಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರ ಕೌಶಲ್ಯ, ಬದ್ಧತೆ ಮತ್ತು ಕಠಿಣ ಪರಿಶ್ರಮವು ಅಪಾರ ಮಹತ್ವದ್ದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಷ್ಟ್ರ ನಿರ್ಮಾಣದತ್ತ ಅವರ ಪ್ರಯತ್ನಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಅಲ್ಲದೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ವಿಶ್ವಕರ್ಮರಿಗೆ ಸಂಬಂಧಿಸಿದ ಸಾರ್ವಕಾಲಿಕ ಜ್ಞಾನವನ್ನು ತಿಳಿಸಿಕೊಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು :

"अनादिरप्रमेयश्च अरूपश्च जयाजयः।

लोकरूपो जगन्नाथः विश्वकर्मन्नमो नमः॥"

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

आप सभी को भगवान विश्वकर्मा जयंती की बहुत-बहुत शुभकामनाएं। 

देवशिल्पी से जुड़े इस दिव्य अवसर पर निर्माण कार्यों में जुटे देशभर के शिल्पकारों एवं हुनरमंद साथियों को मेरा विशेष अभिनंदन। 

आपका कौशल एवं परिश्रम विकसित और आत्मनिर्भर भारत के संकल्प को साकार करने में अत्यंत महत्वपूर्ण है। 

राष्ट्र के नवनिर्माण की दिशा में आपके प्रयासों को हरसंभव प्रोत्साहन मिलता रहे, इसके लिए हम पूरी तरह से प्रतिबद्ध हैं।

अनादिरप्रमेयश्च अरूपश्च जयाजयः। 

लोकरूपो जगन्नाथः विश्वकर्मन्नमो नमः॥

 

*****


(ಪ್ರಕಟಣೆ ಐ.ಡಿ.: 2311497) ವಿಸಿಟರ್ ಕೌಂಟರ್ : 7